ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ; ಹಿಂದೆ ನಿಂತು ಪ್ರಚೋದನೆ ನೀಡುವವರಿಗೆ ಸಿಎಂ ಎಚ್ಚರಿಕೆ
Team Udayavani, Apr 12, 2022, 12:01 PM IST
ಮಂಗಳೂರು: ರಾಜ್ಯದಲ್ಲಿ ಯಾವುದೇ ಧರ್ಮ ಯುದ್ಧ ನಡೆಯುತ್ತಿಲ್ಲ. ಸಂಘಟನೆಗಳು ಪ್ರಚೋದನಕಾರಿ ಮಾತನಾಡುವುದು ವಿಚಾರ ಅಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆಲವರು ಹಿನ್ನೆಲೆಯಿಂದ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಇವತ್ತು ಮಂಗಳೂರಿನಲ್ಲಿ ಬಿಜೆಪಿ ವಿಭಾಗೀಯ ಸರಣಿ ಸಭೆಗಳಿವೆ. ಜಿಲ್ಲಾವಾರು ಸಭೆಗಳು ಮತ್ತು ನಾಯಕರ ಸಭೆಗಳಿವೆ. ಚುನಾವಣಾ ತಯಾರಿ ಹಿನ್ನೆಲೆ ವಿಭಾಗ ಮಟ್ಟದ ಸಭೆಗಳನ್ನು ಮಾಡುತ್ತಿದ್ದೇವೆ. ಎ.16 ಮತ್ತು 17 ರಾಜ್ಯ ಕಾರ್ಯಾಕಾರಿಣಿ ಸಭೆ ಮಾಡಿ ಪಕ್ಷದ ಚರ್ಚೆ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಮೇಕೆದಾಟು ಪ್ರಾರಂಭವಾದ ತಕ್ಷಣ ಕುಮಾರಸ್ವಾಮಿ ಜಲಯಾತ್ರೆ ಮಾಡುತ್ತಿದ್ದಾರೆ. ಇದರ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡುವ ಅಗತ್ಯ ಇಲ್ಲ. ಈಶ್ವರಪ್ಪ ವಿರುದ್ದ ಆರೋಪ ಮಾಡಿದವ ನಾಪತ್ತೆಯಾದ ಬಗ್ಗೆ ಮಾಹಿತಿ ಇಲ್ಲ. ಅದರ ಬಗ್ಗೆ ವಿಚಾರಿಸುತ್ತೇನೆ, ನಿಮ್ಮ ಹತ್ರ ಮಾಹಿತಿ ಇದ್ರೆ ನನಗೆ ಕೊಡಿ, ವಿಚಾರಿಸುತ್ತೇನೆ ಎಂದರು.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್
ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಯಾವುದೇ ರೀತಿಯಲ್ಲಿ ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ. ಡಿಜಿಪಿ ನಿನ್ನೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಾತನಾಡಿದ್ದಾರೆ. ಕಾನೂನು ಸುವ್ಯವಸ್ಥೆ ಮತ್ತು ಕಾನೂನು ರಕ್ಷಣೆ ಬಗ್ಗೆ ಸೂಚನೆ ಕೊಟ್ಟಿದ್ದಾರೆ. ನಾವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದರು.
ಧಾರವಾಡ, ಶಿವಮೊಗ್ಗ, ಕೋಲಾರ ಎಲ್ಲಾ ಕಡೆ ಕಾನೂನು ಕ್ರಮ ಆಗಿದೆ. ಈ ವಿಚಾರದಲ್ಲಿ ಕುಮಾರಸ್ವಾಮಿ ಅನಿಸಿಕೆ ಬೇರೆಯಿರಬಹುದು. ಮೊದಲು ಅವರ ಸರ್ಕಾರದಲ್ಲಿ ಏನು ಮಾಡಿದ್ದಾರೆ ಅಂತ ಆತ್ಮಾವಲೋಕನ ಮಾಡಲಿ ಎಂದು ಟಾಂಗ್ ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ