ಕುಂಬಳಕಾಯಿ ಕಳ್ಳ ಎಂದರೆ ನೀವ್ಯಾಕೆ ಹೆಗಲು ಮುಟ್ಟಿಕೊಳ್ತೀರಿ; ಜಾರ್ಜ್ ಗೆ ಸಿಎಂ ಬೊಮ್ಮಾಯಿ
Team Udayavani, Sep 19, 2022, 2:54 PM IST
ವಿಧಾನಸಭೆ: ಕುಂಬಳಕಾಯಿ ಕಳ್ಳ ಎಂದರೆ ನೀವ್ಯಾಕೆ ಹೆಗಲು ಮುಟ್ಟಿ ಕೊಳ್ಳುತ್ತೀರಿ ಎಂದು ಕಾಂಗ್ರೆಸ್ ಶಾಸಕ ಕೆ.ಜೆ ಜಾರ್ಜ್ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದರು.
ಬೆಂಗಳೂರು ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಂದಾಯ ಸಚಿವ ಆರ್. ಅಶೋಕ ಉತ್ತರ ನೀಡುವ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಜಾರ್ಜ್ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕೆರಳಿದ ಬೊಮ್ಮಾಯಿ, ಕಳೆದ ಕಳೆದ 2015 ರಲ್ಲಿ ಕಂದಾಯ ಇಲಾಖೆಯಿಂದ ಆದೇಶವೊಂದು ಹೊರ ಬಿತ್ತು. ನೀರು ಹರಿಯುವುದು ನಿಂತ ಕೆರೆಗಳ ಪುನಶ್ಚೇತನಕ್ಕೆ ಕ್ರಮ ಜರುಗಿಸಲಾಗಿತ್ತು. ಆದರೆ ಅದಕ್ಕೆ ಅವಕಾಶ ಸಿಕ್ಕಲೇ ಇಲ್ಲ. ನೀವ್ಯಾಕೆ ಮಧ್ಯೆ ಎದ್ದು ನಿಲ್ಲುತ್ತೀರಿ ಎಂದು ಜಾರ್ಜ್ ಗೆ ಸಿಎಂ ಪ್ರಶ್ನೆ ಮಾಡಿದರು. ನಾನು ಮಂತ್ರಿಯಾಗಿದ್ದೆ ಹಾಗಾಗಿ ಮಾತನಾಡುತ್ತಿದ್ದೇನೆ ಎಂದ ಕೆ ಜೆ ಜಾರ್ಜ್ ಸಮಜಾಯಿಸಿ ಕೊಡಲು ಪ್ರಯತ್ನ ಮಾಡಿದರು.
ಇದನ್ನೂ ಓದಿ:ದಸರಾಗೆ ದೈವಿಭಕ್ತಿ ಹೊಂದಿರುವ ರಾಷ್ಟ್ರಪತಿಗಳು ಬರುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಆಗ ಕೆರೆ ಒತ್ತುವರಿಯಲ್ಲಿ ಜಾರ್ಜ್ ಇಲ್ಲ ಬಿಡಿ ಎಂದು ಕಂದಾಯ ಸಚಿವ ಅಶೋಕ್ ಸ್ಪಷ್ಟನೆ ನೀಡುವ ಜತೆಗೆ ಸಿದ್ಧರಾಮಯ್ಯ ಅಂತೂ ಮೊದಲೇ ಇಲ್ಲ ಬಿಡಿ ಎಂದಾಗ ಸದನ ನಗೆಗಡಲಲ್ಲಿ ಮೊಳಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು