ಜಿಲ್ಲಾ ಪಂಚಾಯತ್ ಚುನಾವಣೆ ಸದ್ಯದಲ್ಲೇ ಘೋಷಣೆ?
ಸ್ಥಳೀಯ ಸಂಸ್ಥೆ ಚುನಾವಣೆ: ಕಾನೂನು ಸಲಹೆ ಪಡೆದ ಸಿಎಂ ಬೊಮ್ಮಾಯಿ
Team Udayavani, May 12, 2022, 11:05 AM IST
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಅಡ್ವಕೇಟ್(ಎಜಿ) ಜನರಲ್ ಪ್ರಭುಲಿಂಗ ನಾವದಗಿ ಅವರಿಂದ ಕಾನೂನು ಸಲಹೆ ಪಡೆದಿದ್ದಾರೆ.
ರಾಜ್ಯದಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ಗಳು ಸೇರಿದಂತೆ ಚುನಾವಣೆ ಬಾಕಿ ಇರುವ ಸ್ಥಳೀಯ ಸಂಸ್ಥೆಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಮಂಗಳವಾರ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವೇಳೆ ಇದು ಎಲ್ಲಾ ರಾಜ್ಯಗಳಿಗೂ ಅನ್ವಯವಾಗಲಿದೆ ಎಂದು ಸುಪ್ರೀಂ ಕೊರ್ಟ್ ಹೇಳಿತ್ತು. ಇದೇ ಕಾರಣಕ್ಕೆ ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಸಿಎಂ ಬೊಮ್ಮಾಯಿ ಇಂದು ಸುಪ್ರೀಂ ಕೋರ್ಟ್ ತೀರ್ಪು ಸಂಬಂಧಿಸಿದಂತೆ ಎಜಿ ಅವರ ಸಲಹೆ ಪಡೆದಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುಪ್ರೀಂ ಕೋರ್ಟ್ ನ ಎರಡೂ ತೀರ್ಪುಗಳ ಬಗ್ಗೆಯೂ ಚರ್ಚಿಸುತ್ತೇವೆ. ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು. ಸುಪ್ರೀಂ ಕೋರ್ಟ್ನ ಎರಡು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದರು.
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಈಗಾಗಲೇ ಸಮಿತಿ ಕೂಡ ನೇಮಿಸಿದ್ದೇವೆ. ಅದರ ಬಗ್ಗೆಯೂ ಹಾಗೂ ವಿಪಕ್ಷ ನಾಯಕರ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಮುಂದೆ ಯಾವ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಇದುವರೆಗಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನದ ಪ್ರಕಾರವೇ ಓಬಿಸಿಯವರಿಗೆ ಪ್ರಾತಿನಿಧ್ಯ ಕೊಡುತ್ತಾ ಬಂದಿದ್ದೇವೆ. ಈಗ ಒಬಿಸಿ ಇಟ್ಟುಕೊಂಡೇ ಚುನಾವಣೆ ಮಾಡಬೇಕೆಂಬುದು ನಮ್ಮ ಉದ್ದೇಶ ಆಗಿದೆ. ಹೀಗಾಗಿ ಒಬಿಸಿ ಇಟ್ಟುಕೊಂಡು ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.
ಇದನ್ನೂ ಓದಿ:ಸುಳಿವು ಸಿಗದ ಆಸಿಡ್ ದಾಳಿಕೋರ: ಹಿಂದೆಯೂ ಪ್ರೀತಿಸುವಂತೆ ಯುವತಿಯೊಬ್ಬಳ ಹಿಂದೆ ಬಿದ್ದಿದ್ದ
ಮಧ್ಯಪ್ರದೇಶ ಪುನರ್ ಪರಿಶೀಲನೆ ಅರ್ಜಿ ಬಗ್ಗೆಯೂ ಚರ್ಚಿಸಲಾಗುವುದು. ಇದರಲ್ಲಿ ಬಹಳಷ್ಟು ವಿಷಯಗಳು ಇವೆ. ಒಟ್ಟಾರೆ ಚುನಾವಣೆ ಹಾಗೂ ಒಬಿಸಿ ಮೀಸಲಾತಿ ಆಗುವುದಕ್ಕೆ ಏನೆಲ್ಲ ಕ್ರಮಗಳನ್ನು, ಪ್ರಯತ್ನಗಳನ್ನು ಮಾಡಬೇಕೋ ಅದೆಲ್ಲವನ್ನೂ ಕಾನೂನಾತ್ಮಕವಾಗಿ ಮಾಡುತ್ತೇವೆ ಎಂದರು.
ಮತಾಂತರ ನಿಷೇಧ ಕಾಯಿದೆ ಜಾರಿ ವಿಚಾರ ಕುರಿತು ಮಾತನಾಡಿ, ಸುಗ್ರೀವಾಜ್ಞೆ ಮೂಲಕ ಬಿಲ್ ಜಾರಿ ಬಗ್ಗೆ ಇಂದಿನ ಸಂಪುಟದಲ್ಲಿ ನಿರ್ಣಯ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ