ಸಿಎಂ ಬೊಮ್ಮಾಯಿ ಕೇಶವಕೃಪಾದ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ
Team Udayavani, Jul 29, 2022, 12:29 PM IST
ಬೆಂಗಳೂರು : ಸಿಎಂ ಕೇಶವಕೃಪಾದ ಕೈ ಗೊಂಬೆಯಾಗಿ ಕುಳಿತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಅವರ ತಂದೆ ಎಸ್.ಆರ್. ಬೊಮ್ಮಾಯಿ ಹೀಗಿರಲಿಲ್ಲ. ಅವರು ವಿಶಾಲ ಮನಸ್ಥಿತಿ ಹೊಂದಿದ್ದರು. ಆದರೆ, ಈಗ ಸಿಎಂ ಬೊಮ್ಮಾಯಿ ಅವರು ಆರ್ಎಸ್ಎಸ್ ತಾಳಕ್ಕೆ ಕುಣಿಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಮೂವರ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಗೃಹ ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಖಾಕಿ ಬಗ್ಗೆ ಭಯನೂ ಇಲ್ಲ, ಗೌರವವೂ ಇಲ್ಲ. ನಿನ್ನೆ ಸಿಎಂ ಪ್ರವೀಣ್ ಸಂತಾಪಕ್ಕೆ ತೆರಳಿದ್ದರು. ಆಗ ಕೆಲವೇ ಘಂಟೆಗಳಲ್ಲಿ ಮತ್ತೊಂದು ಕೊಲೆಯಾಗುತ್ತದೆ. ಇದರಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸಾಬೀತಾಗಿದೆ. ಖಾಕಿ ಬಗ್ಗೆ ಭಯವಿದೆಯೆಂದು ಹೇಳಲು ಆಗುತ್ತಿದೆಯಾ ಎಂದು ಪ್ರಶ್ನಿಸಿದರು.
ಎಸ್ಡಿಪಿಐ, ಪಿಎಫ್ಐನ್ನ ಬೆಳೆಸುತ್ತಿರುವುದು ಬಿಜೆಪಿ. ಇದನ್ನ ಸ್ವತಃ ಆರ್ಎಸ್ಎಸ್ ನ ಪ್ರಮುಖರು ಹೇಳುತ್ತಿದ್ದಾರೆ. ಇವರು ಕಾಂಗ್ರೆಸ್ ಗೆ ಉತ್ತರ ಕೊಡುವುದು ಬೇಡ. ಸಾಮೂಹಿಕ ರಾಜೀನಾಮೆ ಕೊಡುತ್ತಿರುವ ಅವರದೇ ಪಕ್ಷದ ಕಾರ್ಯಕರ್ತರಿಗೆ ಉತ್ತರ ನೀಡಲಿ. ನಮ್ಮಂತಹ ಕಾರ್ಯಕರ್ತರಿಗೆ ರಕ್ಷಣೆಯೇ ಇಲ್ಲಾ ಅಂತಾ ಅವರದೇ ಪಕ್ಷದವರು ಕೇಳುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಕೈಮೀರುತ್ತಿದೆ. ಆದರೂ ಯೋಗಿ ಆದಿತ್ಯನಾಥ್ ರ ಯುಪಿ ಮಾಡೆಲ್ ಬಗ್ಗೆ ಮಾತನ್ನಾಡುತ್ತಿದ್ದೀರಾ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಟೀಕೆ
ಕುವೆಂಪು, ಬಸವಣ್ಣ ಮಾಡೆಲ್ ಎಲ್ಲಿ ಹೋಯ್ತು? ಪರಿಸ್ಥಿತಿ ಕೈತಪ್ಪಿರುವ ಕಾರಣ ಯೋಗಿ ಮಾಡೆಲ್ ಕುರಿತು ಮಾತನ್ನಾಡುತ್ತಿದ್ದಾರೆ. ಗಟ್ಟಿಯಾದ ಗೃಹ ಸಚಿವರನ್ನು ಕೇಳುತ್ತಿರುವುದು ಅವರದೇ ಪಕ್ಷದ ಯತ್ನಾಳ್ ಅಲ್ಲವಾ? ಇವರಿಗೆ ಯಾಕೆ ಆರಗ ಜ್ಞಾನೇಂದ್ರರನ್ನು ಬದಲಾಯಿಸಲು ಆಗುತ್ತಿಲ್ಲ ಎಂದು ಟೀಕಿಸಿದರು.
ಈಗ 25 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ಪರಿಹಾರ ಕೊಡುವುದಿದ್ದರೆ ಎಲ್ಲರಿಗೂ ಕೊಡಲಿ. ಇದರಲ್ಲಿ ತಾರತಮ್ಯವೇಕೆ? ಅಷ್ಟಕ್ಕೂ ಇದನ್ನ ಯಾವುದರಿಂದ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ