ಸಿಎಂ ಯಡಿಯೂರಪ್ಪಗೆ ಕೋವಿಡ್ ಸೋಂಕು ದೃಢ: ಶೀಘ್ರ ಚೇತರಿಕೆಗೆ ಹಾರೈಸಿದ ರಾಜ್ಯ ನಾಯಕರು
Team Udayavani, Aug 3, 2020, 8:43 AM IST
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಯಾವುದೇ ಸೋಂಕು ಲಕ್ಷಣಗಳು ಇಲ್ಲದಿದ್ದರೂ ಸೋಂಕು ದೃಢವಾದ ಕಾರಣ ಸಿಎಂ ಬಿಎಸ್ ವೈ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಶೀಘ್ರ ಚೇತರಿಕೆಗೆ ರಾಜ್ಯ ನಾಯಕರು ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್ ಡಿ ಕುಮಾರಸ್ವಾಮಿ, ಸಚಿವರುಗಳು ಟ್ವಿಟ್ ಮಾಡಿ ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.@BSYBJP
— Siddaramaiah (@siddaramaiah) August 3, 2020
ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@CMofKarnataka
1/3— H D Kumaraswamy (@hd_kumaraswamy) August 3, 2020
ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಹಗಲಿರುಳೂ ಶ್ರಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಯವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಲಭ್ಯರಾಗುವಂತಾಗಲಿ ಎಂದು ಹಾರೈಸುತ್ತೇನೆ.
— B Sriramulu (@sriramulubjp) August 3, 2020
My prayers for a quick and complete recovery to our Hon’ble @CMofKarnataka Shri @BSYBJP https://t.co/emV9WShLB9
— Basavaraj S Bommai (@BSBommai) August 2, 2020
ನಮ್ಮ ಜನನಾಯಕ ಶೀಘ್ರ ಗುಣಮುಖರಾಗಲಿ ಎಂದು ನನ್ನ ಪ್ರಾರ್ಥನೆ.
ನಾಡಿನ ಮಹಾಜನತೆಯ ಆಶೀರ್ವಾದ ನಿಮ್ಮ ಮೇಲಿದೆ. Get well soon sir!@BSYBJP https://t.co/FcdXja0q0i
— Dr. Ashwathnarayan C. N. (@drashwathcn) August 2, 2020