ಸಿಎಂ ಬಜೆಟ್ ಪೂರ್ವಭಾವಿ ಸಭೆ
Team Udayavani, Feb 7, 2020, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಬಜೆಟ್ ಪೂರ್ವಭಾವಿ ಸಭೆ ನಡೆಸಿ 11 ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರಾಜಭವನದಲ್ಲಿ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕೆಪಿಸಿ ಭವನಕ್ಕೆ ತೆರಳಿದ ಮುಖ್ಯಮಂತ್ರಿಯವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ ಮತ್ತು ನಾಗರಿಕ ಪೂರೈಕೆ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ, ಜಲಸಂಪನ್ಮೂಲ, ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕಾರ್ಮಿಕ ಇಲಾಖೆಗಳ ಸಭೆ ನಡೆಸಿದರು.
2019-20ನೇ ಸಾಲಿನ ಬಜೆಟ್ನಲ್ಲಿ ಮೀಸಲಿಟ್ಟಿದ ಹಣ ಹಾಗೂ ಘೋಷಿಸಿದ್ದ ಯೋಜನೆಗಳ ಅನುಷ್ಟಾನ, 2020-21 ನೇ ಸಾಲಿನ ಬಜೆಟ್ನಲ್ಲಿ ಕೈಗೊಳ್ಳಬೇಕಿರುವ ಹೊಸ ಯೋಜನೆಗಳ ಬಗ್ಗೆ ಅಧಿಕಾರಿಗಳು ಹಾಗೂ ಸಚಿವರ ಜತೆ ಚರ್ಚಿಸಿದರು. ಸಚಿವರಾದ ಜೆ.ಸಿ.ಮಾಧಸ್ವಾಮಿ, ಸುರೇಶ್ಕುಮಾರ್, ಶಶಿಕಲಾ ಜೊಲ್ಲೆ ಅವರ ಜತೆಯೂ ಚರ್ಚಿಸಿದರು.