ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ; ಪಕ್ಷ ಸಂಘಟನೆಗೆ ಆದ್ಯತೆ

Team Udayavani, May 28, 2024, 6:20 AM IST

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಂದೆ ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಕಾರ್ಯಕರ್ತರ ಭೇಟಿ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು. ಪಕ್ಷದ ಕಚೇರಿಯಲ್ಲಿ ನಡೆದ ನೆಹರು ಪುಣ್ಯಸ್ಮರಣೆ ವೇಳೆ ಮಾತನಾಡಿದ ಅವರು, ತಿಂಗಳಿಗೊಮ್ಮೆ ಮುಖ್ಯಮಂತ್ರಿ ಹಾಗೂ ನಾನು ಒಂದು ದಿನ ಕಾಂಗ್ರೆಸ್‌ ಕಚೇರಿಯಲ್ಲಿ ಕುಳಿತು ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಕೇವಲ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಪಕ್ಷದ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗಿರುತ್ತದೆ. ಇನ್ನು ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಎಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಗಳಿಗೆ ಅಡಿಪಾಯ: ಈ ಸರ್ಕಾರ ನಾಲ್ಕು ವರ್ಷದ ಸರ್ಕಾರ ಅಲ್ಲ. 10 ವರ್ಷದ ಸರ್ಕಾರ. ಇದಕ್ಕಾಗಿ ನಾವು ಈಗಿನಿಂದಲೇ ತಯಾರಿ ನಡೆಸಬೇಕು. ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೃಷ್ಣ ಭೈರೇಗೌಡ ಅವರ ಜತೆ ಚರ್ಚೆ ಮಾಡಿದ್ದೇನೆ. ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್‌ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ. ಎಲ್ಲಾ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಇದರ ಹೊಣೆ ಹೊರಬೇಕು. ಇನ್ನು ರೇಸ್‌ ಕೋರ್ಸ್‌ ರಸ್ತೆಯ ಕಚೇರಿಯ ಕಟ್ಟಡವನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ವಿವರಿಸಿದರು.

ಇವಿಎಂ ಹೆಚ್ಚುಕಮ್ಮಿ ಆಗದಿದ್ದರೆ
ಗೆಲುವು ನಮ್ಮದೇ: ಡಿಕೆಶಿ
ನೀವೆಲ್ಲರೂ ಕಷ್ಟಪಟ್ಟು ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೀರಿ. ಕಾರ್ಯಕರ್ತರು, ಮತದಾರರ ಶ್ರಮದಿಂದ ಸರ್ಕಾರ ಬಂದಿದೆ. ಅದೇ ಶ್ರಮದಿಂದಾಗಿ ಕರ್ನಾಟಕದಲ್ಲೇ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ಈ ಬಾರಿ ಸದ್ಯ ಚರ್ಚೆಯಾಗುತ್ತಿರುವಂತೆ ಚುನಾವಣೆಯಲ್ಲಿ ಇವಿಎಂ ಹೆಚ್ಚು ಕಮ್ಮಿಯಾಗದಿದ್ದರೆ ಜನ ನಮಗೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ ಎಂಬ ನಂಬಿಕೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.