ದೇಶದ ಅತಿ ದೊಡ್ಡ ಐಕಿಯಾ ಮಳಿಗೆ ಉದ್ಘಾಟಿಸಿದ ಸಿಎಂ: ಸ್ಥಳೀಯರಿಗೆ ಶೇ 75 ಉದ್ಯೋಗ

ನಾಗಸಂದ್ರದಲ್ಲಿ ಸ್ವೀಡನ್ ಮೂಲದ ಕಂಪನಿ 'ಐಕಿಯಾ'

Team Udayavani, Jun 22, 2022, 2:55 PM IST

1-dfdsff

ಬೆಂಗಳೂರು: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿತ್ತು. ಸುಮಾರು 3000 ಕೋಟಿ ಹೂಡಿಕೆ ಮಾಡಲು ತೀರ್ಮಾನ ಮಾಡಿದ್ದಾರೆ ಎಂದರು.

ಕುಶಲಕರ್ಮಿಗಳಿಗೆ ಅವಕಾಶ

ಮಳಿಗೆ ಪ್ರಾರಂಭವಾದುದರಿಂದ ಸ್ಥಳೀಯ ಕುಶಲಕರ್ಮಿಗಳಾದ, ಬಡಗಿಗಳು, ಶಿಲ್ಪಕಾರರು, ಉತ್ಪಾದಕರಿಗೆ ಅವಕಾಶ ದೊರೆಯುತ್ತದೆ. ಶೇ 27 ರಷ್ಟು ಅವಕಾಶ ನೀಡುವುದಾಗಿ ಹೇಳಿದ್ದಾರೆ. ಅದನ್ನು ಹೆಚ್ಚಿಗೆ ಮಾಡುವಂತೆ ಮನವಿ ಮಾಡಲಾಗಿದೆ. ಇನ್ನಷ್ಟು ಮಳಿಗೆಗಳನ್ನು ತೆಗೆಯಬೇಕು. ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಬೆಂಗಳೂರಿಗೆ ಆ ಸಾಮರ್ಥ್ಯವಿದೆ. ಬೆಂಗಳೂರು ದಕ್ಷಿಣದಲ್ಲಿ ಮಳಿಗೆ ತೆರೆಯಲು ತಿಳಿಸಲಾಗಿದೆ ಎಂದರು. ಬೆಂಗಳೂರಿನಲ್ಲಿಯೇ ಮೊದಲ ಮಳಿಗೆ ಪ್ರಾರಂಭಿಸಬೇಕೆಂಬ ಉದ್ದೇಶ ಐಕಿಯಾ ಸಂಸ್ಥೆಗೆ ಇತ್ತು. ಆದರೆ ಸಹಕಾರ ದೊರೆಯಲಿಲ್ಲ. ನಂತರ ಬಹಳ ಕಷ್ಟಪಟ್ಟು ಸ್ಥಳ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

ಮಧ್ಯಮವರ್ಗದವರ ಕನಸು ನನಸಾಗಿಸಲು ಸಹಕಾರಿ

ಐಕಿಯಾದಲ್ಲಿ ಉತ್ತಮ ಗುಣಮಟ್ಟದ, ಬಾಳಿಕೆ ಬರುವ ಹಾಗೂ ಕೈಗೆಟುಕುವ ಬೆಲೆಯ ಪೀಠೋಪಕರಣಗಳಿವೆ. ಸಾಮಾನ್ಯ ಜನರಿಗೆ, ಮಧ್ಯಮವರ್ಗದವರ ಕನಸು ನನಸಾಗಿಸಲು ಇದು ಸಹಕಾರಿಯಾಗಿದೆ. ಉದ್ಯಮ ಬೆಳೆಯಬೇಕು ಹಾಗೂ ಉದ್ಯೋಗಾವಕಾಶಗಳು ಹೆಚ್ಚಬೇಕು ಎಂಬ ಕಾರಣಕ್ಕಾಗಿ ನಾವು ಇಂತಹ ಉದ್ಯಮಗಳಿಗೆ ಪ್ರೋತ್ಸಾಹ ನೀಡಲೇಬೇಕು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು…

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.