ಕೋವಿಡ್ ಓಡಿಸಲು ಸಿಎಂ ನವಸೂತ್ರ
ಚಳಿಗಾಲದಲ್ಲಿ ಕೋವಿಡ್ ತಡೆಗೆ ಕ್ರಮ ವಹಿಸಲು ಸಿಎಂ ಸೂಚನೆ
Team Udayavani, Oct 29, 2020, 12:32 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸದ್ಯ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖದ ಹಾದಿಯಲ್ಲಿದ್ದರೂ ಚಳಿಗಾಲದ ಆತಂಕ ಕಾಡುತ್ತಿದೆ. ಹಬ್ಬಗಳ ಋತು ಮತ್ತು ಚಳಿಗಾಲದ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿ ಸಿಎಂ ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊರೊನಾ ನಿಯಂತ್ರಣಕ್ಕಾಗಿ ನವ ಸೂತ್ರಗಳನ್ನು ನೀಡಿದ್ದಾರೆ.
ಈ ಸಂಬಂಧ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಪತ್ರ ಬರೆದಿದ್ದಾರೆ. ನಿಯಂತ್ರಣ ಕ್ರಮಗಳ ಅನುಷ್ಠಾನ ವರದಿಯನ್ನು ಪ್ರತೀ ವಾರ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
01- ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಬೂತ್ ಮಟ್ಟದ ಸಮಿತಿ ಕ್ರಿಯಾಶೀಲಗೊಳಿಸುವುದು. ಅವುಗಳ ಕಾರ್ಯ ಪರಾಮರ್ಶಿಸುವುದು.
02- ಪ್ರಾಥಮಿಕ ಸಂಪರ್ಕಿತರು ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗುವಂತೆ ಕ್ರಮ ವಹಿಸಬೇಕು.
03- ಸಹ ರೋಗ ಹೊಂದಿರುವ ಹಿರಿಯ ನಾಗ ರಿಕರ ಆರೋಗ್ಯದ ಬಗ್ಗೆ ನಿಗಾ.
04- ಹೋಂ ಐಸೋಲೇಶನ್ ಮತ್ತು ಹೋಮ್ ಕ್ವಾರಂಟೈನ್ನಲ್ಲಿ ಇರುವವರ ಆರೋಗ್ಯದ ಮೇಲೆ ನಿಗಾ.
05- ಐಸಿಯುವಿನಲ್ಲಿರುವ ರೋಗಿಗಳಿಗಾಗಿ ತಜ್ಞರೊಂದಿಗೆ ಟೆಲಿ ಐಸಿಯು ವ್ಯವಸ್ಥೆ ಬಳಕೆ ಮಾಡಿ, ಉತ್ತಮ ಚಿಕಿತ್ಸೆ ನೀಡಿ ಹೆಚ್ಚು ಸಾವು ಸಂಭವಿಸದಂತೆ ನೋಡಿಕೊಳ್ಳುವುದು,
06- 24 ತಾಸುಯೊಳಗೆ ವೈದ್ಯರು ರೋಗಿಗಳ ಡೆತ್ ಆಡಿಟ್ ವರದಿಯನ್ನು ಸಲ್ಲಿಕೆ ಮಾಡುವುದು.
07- ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ನೋಡಿಕೊಳ್ಳುವುದು. ದಂಡ ಪ್ರಮಾಣದ ಬಗ್ಗೆ ಅರಿವು ಮೂಡಿಸುವುದು.
08- ಕೊರೊನಾ ನಿಯಮ ಉಲ್ಲಂ ಸುವವರ ವಿರುದ್ಧ ಪೊಲೀಸ್ ಇಲಾಖೆ ಮೂಲಕ ಕ್ರಮ ಜರುಗಿಸುವುದು.
09- ಸ್ಥಳೀಯ ಧಾರ್ಮಿಕ ಗುರುಗಳ ಮೂಲಕ ಜನರ ಮನಸ್ಸಿನಲ್ಲಿನ ಕೊರೊನಾ ಭಯ ಹೋಗಲಾಡಿಸುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ