ಸಿಎಂ ಕುಮಾರಸ್ವಾಮಿ, ಮಾಜಿ ಪಿಎಂಗೆ ಪ್ರಕೃತಿ ಚಿಕಿತ್ಸೆ ಪೂರ್ಣ
Team Udayavani, May 4, 2019, 3:05 AM IST
ಕಾಪು: ಮೂಳೂರು ಸಾಯಿರಾಧಾ ರೆಸಾರ್ಟ್ನಲ್ಲಿ ಐದು ದಿನಗಳ ಪ್ರಕೃತಿ ಚಿಕಿತ್ಸೆ ಪಡೆದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಕ್ರವಾರ ಮಧ್ಯಾಹ್ನ ನಿರ್ಗಮಿಸಿದ್ದಾರೆ.
ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಕ್ಯಾಮರಾಗಳತ್ತ ತಿರುಗಿಯೂ ನೋಡದೆ ಹೊರಟ ಮುಖ್ಯಮಂತ್ರಿ, ಮೂಳೂರಿನಿಂದ ಶೃಂಗೇರಿಗೆ ಪ್ರಯಾಣ ಬೆಳೆಸಿದರು. ನಿರ್ಗಮನದ ಸಂದರ್ಭದಲ್ಲೂ ರೆಸಾರ್ಟ್ ಸುತ್ತಮುತ್ತ ಮತ್ತು ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
40 ಜನರ ತಂಡದಿಂದ ಪಂಚಕರ್ಮ ಚಿಕಿತ್ಸೆ: ಮೂಳೂರು ಸಾಯಿರಾಧಾ ಹೆರಿಟೇಜ್ನಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಡಾ| ತನ್ಮಯ್ ಗೋಸ್ವಾಮಿ ನೇತೃತ್ವದ ಗೋಸ್ವಾಲ್ ಆಯುರ್ವೇದಿಕ್ ಸಂಸ್ಥೆಯ 40 ಜನರ ತಂಡ ಪಂಚಕರ್ಮ ಚಿಕಿತ್ಸೆ ನೀಡಿದೆ. 40 ಜನರ ತಂಡದಲ್ಲಿ ನಾಲ್ವರು ತಜ್ಞ ವೈದ್ಯರು, 20 ಮಂದಿ ತಂತ್ರಜ್ಞರು ಮತ್ತು 16 ಮಂದಿ ಸಿಬ್ಬಂದಿಯಿದ್ದರು.
ಸಿಎಂ ಮತ್ತು ಮಾಜಿ ಪಿಎಂಗೆ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಮತ್ತು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಸಾಥ್ ನೀಡಿದ್ದು, ಶುಕ್ರವಾರ ನಿರ್ಗಮನದ ವೇಳೆ ಜೆಡಿಎಸ್ ಮುಖಂಡ ಶಿವರಾಮೇಗೌಡ ಜತೆಗಿದ್ದರು.
ಸಿಎಂ ಮತ್ತು ಮಾಜಿ ಪಿಎಂಗೆ ವಿಶ್ರಾಂತಿ ಮತ್ತು ಊಟೋಪಚಾರದ ವ್ಯವಸ್ಥೆ ಮಾಡಲಾಗಿದ್ದು, ಗೋಸ್ವಾಲ್ ಆಯುರ್ವೇದಿಕ್ ಸಂಸ್ಥೆಯ ವತಿಯಿಂದ ಪಂಚಕರ್ಮ ರಸಾಯನ್ ಥೆರಪಿ ನಡೆಸಲಾಗಿದೆ. ಯೋಗ, ಲೇಪನ, ಮಸಾಜ್ನೊಂದಿಗೆ ಯೋಗಿಕ್ ಆಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆರೋಗ್ಯ ವರ್ಧನೆ, ದೇಹದ ಪುಷ್ಟಿಗಾಗಿ ಪಂಚಕರ್ಮ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು, ಉಲ್ಲಸಿತರಾಗಿ ನಿರ್ಗಮಿಸಿದ್ದಾರೆ.
-ಡಾ| ತನ್ಮಯ್ ಗೋಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ