ಕಬ್ಬು ಬೆಳೆಗಾರರೊಂದಿಗೆ ಸಿಎಂ ಸಭೆ ; ಸರ್ಕಾರದಲ್ಲಿನ ಮಾಲೀಕರೇ ಗೈರು !
Team Udayavani, Nov 20, 2018, 2:50 PM IST
ಬೆಂಗಳೂರು: ಕಬ್ಬು ಬೆಳೆಗಾರರೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮಧ್ಯಾಹ್ನ ಮಹತ್ವದ ಸಭೆ ನಡೆಸುತ್ತಿದ್ದಾರೆ. ಸಭೆಗೆ ಸರ್ಕಾರದಲ್ಲಿರುವ ಕಬ್ಬಿನ ಕಾರ್ಖಾನೆಯ ಮಾಲೀಕರೇ ಗೈರಾಗಿದ್ದಾರೆ.
ಸಭೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರಾದ ಕುರುಬೂರು ಶಾಂತಕುಮಾರ್ , ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ , ಬೆಳಗಾವಿ, ಅಥಣಿ, ಬಾಗಲಕೋಟೆ ಭಾಗದ ಕಬ್ಬು ಬೆಳಗಾರರು, ಬೆಳಗಾವಿ ಭಾಗದ ಶಾಸಕರು ಹಾಜರಾಗಿದ್ದಾರೆ.
ಸಭೆಗೆ ಸಕ್ಕರೆ ಕಾರ್ಖಾನೆ ಮಾಲೀಕರಾದ ಬೆಳಗಾವಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಯ ಉಮೇಶ್ ಕತ್ತಿ ಸೇರಿದಂತೆ ಹಲವು ಸಕ್ಕರೆ ಕಾರ್ಖಾನೆ ಮಾಲೀಕ ಜನಪ್ರತಿನಿಧಿಗಳು ಗೈರಾಗಿದ್ದಾರೆ.
ಪ್ರತ್ಯೇಕ ಸಭೆ
ಸಕ್ಕರೆ ಸಚಿವ ಕೆ.ಜೆ.ಜಾರ್ಜ್ ಮತ್ತು ಅಧಿಕಾರಿಗಳೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ವಿವರಗಳನ್ನು ಪಡೆದಿದ್ದಾರೆ.
ಸುಳ್ಳು ಮಾಹಿತಿ ನೀಡಲಾಗಿದೆ
ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಮತ್ತು ರೈತರಿಗೆ ವಂಚಿಸುತ್ತಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
38 ಕೋಟಿ ರೂಪಾಯಿ ಮಾತ್ರ ಬಾಕಿ ?
ಕಬ್ಬಿನ ಕಾರ್ಖಾನೆಗಳು ಒಟ್ಟು ರೈತರಿಗೆ 38 ಕೋಟಿ ರೂಪಾಯಿ ಹಣ ಬಾಕಿ ನೀಡಲು ಇದೆ ಎಂದು ಸರ್ಕಾರ ಹೇಳಿದರೆ, 100 ಕೋಟಿಗೂ ಹೆಚ್ಚು ಹಣ ನೀಡಲು ಬಾಕಿ ಇದೆ ಎಂದು ರೈತ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ, ರೈತರ ಸಂಪೂರ್ಣ ಸಾಲ ಸೇರಿ ಸುಮಾರು 30 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ