ಸಿಎಂ,ಜಿಟಿಡಿ ನಾಮಪತ್ರ,ಕಾರ್ಯಕರ್ತರ ಮುಖಾಮುಖಿ; ಲಾಠಿ ಚಾರ್ಜ್
Team Udayavani, Apr 20, 2018, 2:05 PM IST
ಮೈಸೂರು: ಚುನಾವಣಾ ರಣಾಂಗಣವಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹುರಿಯಾಳುಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ನಾಮಪತ್ರ ಸಲ್ಲಿಸುತ್ತಿದ್ದು, ಭರ್ಜರಿ ಬಲ ಪ್ರದರ್ಶನ ಮಾಡಿದ್ದಾರೆ.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಏಕಕಾಲದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ನ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್ ನಡೆಸಿದರು.
ಮೊದಲು ಸಿದ್ದರಾಮಯ್ಯ ಅವರು ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಅವರು ಆಗಮಿಸುವುದು ತಡವಾದ ಕಾರಣ ಮೆರವಣಿಗೆ ಅವಕಾಶ ನೀಡಲಿಲ್ಲ. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು.ಎರಡೂ ಕಡೆಯ ಕಾರ್ಯಕರ್ತರ ತೀವ್ರ ವಾಗ್ವಾದವೂ ನಡೆಯಿತು. ಪರಿಸ್ಥಿತಿ ನಿಯಂತ್ರಿ ಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಪುತ್ರ ಯತೀಂದ್ರ ರೊಂದಿಗೆ ಸಿದ್ದರಾಮಯ್ಯನ ಹುಂಡಿಯಲ್ಲಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಆಂಜೆನೆಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ