ಸಿಎಂ ಮಹಿಳೆಯನ್ನು ಅವಮಾನಿಸಿಲ್ಲ,ಎಲ್ಲರನ್ನೂ ತಾಯಿ ಅಂತ ಮಾತಾಡಿಸ್ತಾರೆ
Team Udayavani, Nov 21, 2018, 3:01 PM IST
ಉಡುಪಿ: ಹೋರಾಟ ನಿರತ ರೈತ ಮಹಿಳೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ವಿವಾದಕ್ಕೆ ಗುರಿಯಾಗಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಅವರು ಪ್ರತಿಕ್ರಿಯೆ ನೀಡಿದ್ದು,ಸಿಎಂ ಕೆಟ್ಟ ಅರ್ಥದಲ್ಲಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಜಯಮಾಲಾ ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಹಿಳೆಯನ್ನು ಅವಮಾನಿಸಿಲ್ಲ, ಅವರು ಕೆಟ್ಟ ಅರ್ಥದಲ್ಲಿ ಹೇಳಿಲ್ಲ. ಅವರು ಎಲ್ಲಾ ಮಹಿಳೆಯರ ಬಗ್ಗೆ ಗೌರವ ಹೊಂದಿದ್ದಾರೆ, ಎಲ್ಲರನ್ನೂ ತಾಯಿ ಎಂದೇ ಕರೆಯುತ್ತಾರೆ’ ಎಂದರು.
ಕಬ್ಬು ಬೆಳೆಗಾರರ ಸಭೆಗೆ ಸಕ್ಕರೆ ಕಾರ್ಖಾನೆ ಮಾಲೀಕರು ಗೈರಾದ ಕುರಿತು ಪ್ರಶ್ನಿಸಿದಾಗ ‘ಅವರು ಏನು ಸಂದಿಗ್ಧತೆಯಲ್ಲಿ ಸಿಲುಕಿದ್ದರೇನೋ, ನಾವು ಆ ಬಗ್ಗೆ ಮಾತುಕತೆ ನಡೆಸುತ್ತೇವೆ’ ಎಂದರು.
ರೈತ ಮಹಿಳೆಯ ಟೀಕೆಯ ವಿರುದ್ಧ ಕಿಡಿ ಕಾರಿದ್ದ ಸಿಎಂ ಆ ಮಹಿಳೆ ನಾಲ್ಕು ವರ್ಷ ಎಲ್ಲಿ ಮಲಗಿದ್ದಳು ಎಂದು ಹೇಳಿಕೆ ನೀಡಿದ್ದರು.ಆ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!