ಗೋವಾ ನಡೆಗೆ ಸಿಎಂ ತರಾಟೆ
Team Udayavani, Jan 31, 2018, 9:15 AM IST
ಬೆಂಗಳೂರು: ಮಹದಾಯಿ ವಿಚಾರದಲ್ಲಿ ತಂಟೆ, ತಗಾದೆ ತೆಗೆಯುವುದು, ಕಾನೂನು ಮತ್ತು ಶಿಷ್ಟಾಚಾರ ಉಲ್ಲಂಘನೆಯಂತಹ ಕೆಲಸವನ್ನು ಗೋವಾ ರಾಜ್ಯ ಮಾಡಿದರೆ, ಕರ್ನಾಟಕವು ದೇಶದ ಕಾನೂನು ಮತ್ತು ಸಂವಿಧಾನ ಗೌರವಿಸುವ ಕೆಲಸ ಮಾಡಿದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆ ಇರುವ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹದಾಯಿ ವಿಚಾರದಲ್ಲಿ ಗೋವಾ ರಾಜ್ಯದ ನಡೆಯನ್ನು ಕಟು ಮಾತುಗಳಲ್ಲಿ ಖಂಡಿಸಿದ ಸಿದ್ದರಾಮಯ್ಯ, ಮಹದಾಯಿ ನದಿ ಪಾತ್ರದಲ್ಲಿ
ಯಾವುದೇ ನಿಯಮದ ಉಲ್ಲಂಘನೆ ಆಗಿಲ್ಲ. ನಿಯಮ ಉಲ್ಲಂಘನೆ ಆಗಿದ್ದರೆ ನ್ಯಾಯ ಮಂಡಳಿ ತೀರ್ಮಾನ ಹೇಳಲಿ. ಗೋವಾದ ಉಪ ಸಭಾಪತಿ ಹೇಳಿದ್ದೆಲ್ಲ ಕಾನೂನು ಅಥವಾ ತೀರ್ಮಾನ ಆಗುವುದಿಲ್ಲ. ಅವರು ಬಂದಿದ್ದೇ ಕದ್ದು ಮುಚ್ಚಿ. ಹೀಗಿರುವಾಗ ನಮಗೆ ಅವರು
ಹೇಳುವುದೇನು? ತಂಟೆ ಮಾಡುವುದೇ ಗೋವಾದ ಕೆಲಸ. ನಮ್ಮ ನೀರು ನಮಗೆ ಕೊಡಿ ಎಂದು ಕೇಳಿದರೆ ಗೋವಾದವರು ಗಲಾಟೆ ಮಾಡುತ್ತಾರೆ. ಏನು ಮಾಡುವುದು ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಒಟ್ಟು 45 ಟಿಎಂಸಿ ನೀರು ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುತ್ತದೆ. 200 ಟಿಎಂಸಿ ನೀರು ಸಮುದ್ರ ಸೇರುತ್ತಿದ್ದರೂ, ಗೋವಾದವರು ಅದನ್ನು ಬಳಸಿಕೊಳ್ಳುತ್ತಿಲ್ಲ. ನಮಗೆ 7.5 ಟಿಎಂಸಿ ನೀರು ಕುಡಿಯಲು ಕೊಡಿ ಎಂದರೆ ಗೋವಾ ರಾಜ್ಯದವರು
ಕ್ಯಾತೆ ತೆಗೆದಿದ್ದಾರೆ ಎಂದು ಮುಖ್ಯಮಂತ್ರಿ ಗೋವಾ ವಿರುದ್ಧ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ