ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ: ಅಗತ್ಯ ಬಿದ್ದರೆ ಎನ್ ಐಎ ತನಿಖೆಗೆ ನೀಡುತ್ತೇವೆ; ಸಿಎಂ
Team Udayavani, Mar 3, 2024, 2:03 PM IST
ಚಿಕ್ಕಮಗಳೂರು: ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ ಸಿಸಿಬಿಗೆ ನೀಡಿದ್ದೇವೆ. ಅಗತ್ಯ ಬಿದ್ದರೆ ಎನ್ ಐಎ ಗೆ ವಹಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಾಂಬ್ ಬ್ಲಾಸ್ಟ್ ಪ್ರಕರಣ ಸಿಲ್ಲಿ ಪ್ರಕರಣ ಅಲ್ಲ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಕ್ಕೆ ಜನರ ಭದ್ರತೆ ಮುಖ್ಯ, ಜನರಿಗೆ ಸೆಕ್ಯೂರಿಟಿ ಕೊಡಬೇಕು ಎಂದು ಶರಣ್ ಗೌಡ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಎನ್ ಐಎಗೆ ನೀಡಬೇಕೆಂಬ ಬಿಜೆಪಿ ಆಗ್ರಹಕ್ಕೆ ಪ್ರತಿಕ್ರಿಯಿಸಿ, ಪ್ರಕರಣವನ್ನು ಸಿಸಿಬಿಗೆ ನೀಡಿದ್ದೇವೆ. ತನಿಖೆ ಆರಂಭವಾಗಿದೆ. ಯಾರು ಸಿಕ್ಕಿಲ್ಲ. ಸಿಕ್ಕರೇ ನೋಡೋಣ, ಅಗತ್ಯ ಬಿದ್ದರೆ ಎನ್ ಐಎ ಗೆ ನೀಡಲಾಗುವುದು ಎಂದರು.
ಬ್ರಾಂಡ್ ಬೆಂಗಳೂರು ಬಾಂಬ್ ಬೆಂಗಳೂರು ಆಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಜೆಪಿ ಅವರ ಕಾಲದಲ್ಲೂ ಬಾಂಬ್ ಬ್ಲಾಸ್ಟ್ ಆಗಿತ್ತು. 2008ರಲ್ಲಿ ನಾಲ್ಕು ಬಾರಿ ಬಾಂಬ್ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ಪ್ರಕರಣ ಸಮರ್ಥನೆ ಮಾಡುತ್ತಿಲ್ಲ. ಬಿಜೆಪಿ ರಾಜಕೀಯ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ