ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ
Team Udayavani, May 25, 2024, 8:37 PM IST
ಮೈಸೂರು: ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಸಿಎಂ ನಿವಾಸದ ಬಳಿ ತಮ್ಮ ಅಹವಾಲು ಹೇಳಲು ಹಾಗೂ ಮನವಿ ಸಲ್ಲಿಸಲು ಬಂದವರಲ್ಲಿಯೇ ಸಿಎಂ ಸಿದ್ದರಾಮಯ್ಯ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.
ಸಿಎಂ ನಿವಾಸಕ್ಕೆ ಭೇಟಿ ನೀಡಿದ ಕೆಲವು ನಾಯಕರ ಬೆಂಬಲಿಗರು ತಮ್ಮ ನೆಚ್ಚಿನ ನಾಯಕರಿಗೆ ಪರಿಷತ್ ಚುನಾವಣೆಯಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಅದನ್ನು ಆಲಿಸಿದ ಸಿದ್ದರಾಮಯ್ಯ, ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗದು ಎಂದು ಹೇಳಿದರು.
ಇದೇ ವೇಳೆ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರೆ, ಉಳಿದ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಮತ್ತೆ ದೋಸೆ ಸವಿದ ಸಿದ್ದರಾಮಯ್ಯ :
ಮೈಸೂರು: ಎರಡು ದಿನಗಳಿಂದ ಮೈಸೂರಿನಲ್ಲೇ ವಾಸ್ತವ್ಯ ಹೂಡಿರುವ ಸಿಎಂ ಸಿದ್ದರಾಮಯ್ಯ ಶನಿವಾರ ಮುಂಜಾನೆಯೂ ಅಗ್ರಹಾರದಲ್ಲಿ ಮೈಲಾರಿ ಹೊಟೆಧೀಲ್ಗೆ ತೆರಳಿ ದೋಸೆ, ಇಡ್ಲಿ ಸವಿದರು. ಶನಿವಾರ ಬೆಳಗ್ಗೆ ಮಂಗಳೂರಿಗೆ ತೆರಳುವ ಮುನ್ನ ನಗರದ ಅಗ್ರಹಾರದಲ್ಲಿರುವ ಮೈಲಾರಿ ಹೊಟೇಲ್ಗೆ ಸಚಿವ ಕೆ. ವೆಂಕಟೇಶ್ ಜತೆಗೆ ತೆರಳಿದ ಸಿದ್ದರಾಮಯ್ಯ, ಬಿಸಿ ಬಿಸಿ ಮೈಲಾರಿ ದೋಸೆ ಹಾಗೂ ಇಡ್ಲಿ ಸವಿದರು. ಈ ವೇಳೆ ಹೊಟೇಲ್ ಮಾಲಕರನ್ನು ಹತ್ತಿರಕ್ಕೆ ಕರೆದು ಆತ್ಮೀಯವಾಗಿ ಮಾತನಾಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ
Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ
MUST WATCH
ಹೊಸ ಸೇರ್ಪಡೆ
Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.