ಚಾಮುಂಡೇಶ್ವರಿಯಲ್ಲಿ ಪ್ರಚಾರಕ್ಕೆ ಧುಮುಕಿದ ಸಿಎಂ: ಹೂಮಳೆಯ ಸ್ವಾಗತ


Team Udayavani, Mar 29, 2018, 2:32 PM IST

cm siddu 201.jpg

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಅವರ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗುರುವಾರದಿಂದ ಪ್ರಚಾರ ಕಾರ್ಯಕ್ಕೆ ಧುಮುಕಿದ್ದು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದ್ದಾರೆ. 

ರಮ್ಮನಹಳ್ಳಿಯಲ್ಲಿ  ಕಾಂಗ್ರೆಸ್‌ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತ ಕೋರಿದರು. ಭಾರೀ ಸಂಖ್ಯೆಯ ಸಾವಿರಾರು ಕಾರ್ಯಕರ್ತರು ಕಾಲ್ನಡಿಗೆಯ ಪ್ರಚಾರ ಮೆರವಣಿಗೆಯಲ್ಲಿ ಭಾಗಿಯಾದರು. ಕೆಲ ಅಭಿಮಾನಿಗಳು ಸಿದ್ದರಾಮಯ್ಯ ಅವರನ್ನು ಹೆಗಲ ಮೇಲೆ ಹೊತ್ತು ಸಾಗಿದರು. ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. 

ಮೂರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಕೆಲ ಅಭಿಮಾನಿಗಳು ದೇವಾಲಯದಲ್ಲಿರುವ ಘಂಟೆ ಬಾರಿಸುವಂತೆ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಕೊನೆಗೂ ಒತ್ತಾಯಕ್ಕೆ ಮಣಿದ ಸಿದ್ದರಾಮಯ್ಯ ಅವರು ಘಂಟೆ  ಬಾರಿಸಿದರು. ಈ ವೇಳೆ ಕಾಲು ಜಾರಿ ಮುಗ್ಗರಿಸಿದರು. ಕೂಡಲೇ ಅವರನ್ನು ಅಭಿಮಾನಿಗಳು ಹಿಡಿದರು. 

ಸಿದ್ದರಾಮಯ್ಯ ಅವರು ಗುರುವಾರದಿಂದ 5 ದಿನಗಳ ಕಾಲ ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿ, ಕಾರ್ಯಕರ್ತರ ಜೊತೆ ಸರಣಿ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. 

ನಾನು ಎಷ್ಟು ಭಾರಿ ಸ್ಪರ್ಧಿಸಿದ್ದೇನೆ ಗೊತ್ತಾ? 

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ ಸಿಎಂ ಸಿದ್ದರಾಮಯ್ಯ ‘ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಷ್ಟು ಬಾರಿ ಸ್ಪರ್ಧಿಸಿದ್ದೇನೆ ಎನ್ನುವುದು ಕುಮಾರಸ್ವಾಮಿಗೆ ಗೊತ್ತಿದೆಯಾ ? ನಾನು 7 ಬಾರಿ ಸ್ಪರ್ಧಿಸಿ 5 ಬಾರಿ ಗೆದ್ದಿದ್ದೇನೆ. ಈ ಬಾರಿ ನನಗೆ ಕ್ಷೇತ್ರದ ಮೇಲೆ ವಿಶ್ವಾಸವಿದ್ದು ಗೆಲುವು ಸಾಧಿಸುತ್ತೇನೆ’ ಎಂದರು.

ಹೋದಲ್ಲೆಲ್ಲಾ ಶಾ ಹಿಂಬಾಲಿಸುತ್ತಿದ್ದಾರೆ !

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ವಿರುದ್ಧ ಕಿಡಿ ಕಾರಿ ‘ನಾನು ಹೋದಲ್ಲೆಲ್ಲಾ ಶಾ ಹಿಂಬಾಲಿಸುತ್ತಿದ್ದಾರೆ. ಜೈಲಿಗೆ ಹೋದವರು ನನಗೆ ಪಾಠ ಮಾಡುವ ಅಗತ್ಯ ಇಲ್ಲ’ ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.