ಬಸವ ಜಯಂತಿ : ಬಸವಣ್ಣ ಅವರ ಪುತ್ಥಳಿಗೆ ಸಿಎಂ ಮಾಲಾರ್ಪಣೆ
Team Udayavani, May 14, 2021, 11:44 AM IST
ಬೆಂಗಳೂರು ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ,ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ, ಬಸವ ಸಮಿತಿ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ, 12ನೇ ಶತಮಾನದಲ್ಲಿ ಸಾಮಾಜಿಕ ಅರಿವು ಮೂಡಿಸಿದ ಸಾಮಾಜಿ ಸುಧಾರಕ ಬಸವಣ್ಣ. ವಿಚಾರ ಮಂಥನಕ್ಕೆ ಇವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ವ್ಯವಸ್ಥೆಯ ಮೂಲವೆಂದೇ ಕರೆಯಬಹುದು. ಕ್ರಾಂತಿ ಯೋಗಿ ಎಂದೇ ಗುರುತಿಸಿಕೊಂಡ ಬಸವಣ್ಣ ಸಮಾನತೆ, ಕಾಯಕ ತತ್ವವನ್ನು ಸಾರಿದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.