ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ : ಸುಳಿವು ನೀಡಿದ ಸಿಎಂ
Team Udayavani, Jun 10, 2021, 2:18 PM IST
ಶಿವಮೊಗ್ಗ : ಶಿವಮೊಗ್ಗ, ಮೈಸೂರು, ಹಾಸನ, ತುಮಕೂರು, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಜೂನ್ 14 ರ ಬಳಿಕ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಮಾಡಲಾಗಿದೆ. ಸೋಂಕು ಹೆಚ್ಚಾಗಿರುವ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಸಂವಾದ ಮಾಡಿ ಮಾತನಾಡಿದ್ದಾರೆ. 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಈ ಜಿಲ್ಲೆಗಳಲ್ಲಿ ಶೇ.10 ಕ್ಕಿಂತ ಹೆಚ್ಚಿರುವ ಪಾಸಿಟಿವಿಟಿ ರೇಟ್ ಇದೆ. ಈ ಕಾರಣದಿಂದ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿಗಳ ಸಭೆಯಲ್ಲೇ ಲಾಕ್ ಡೌನ್ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ.