ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ
Team Udayavani, Jan 22, 2021, 8:21 AM IST
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಕಲ್ಲುಗಣಿಗಾರಿಕೆಯಲ್ಲಿ ಸ್ಪೋಟವಾಗಿ ಹಲವು ಮಂದಿ ಕಾರ್ಮಿಕರು ಮೃತಪಟ್ಟ ಘಟನೆಯ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಬಿಎಸ್ ವೈ, ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.
ಗುರುವಾರ ರಾತ್ರಿ 10.20ರ ಸುಮಾರಿಗೆ ಹುಣಸೋಡು ಬಳಿ ಜಿಲೆಟಿನ್ ಕಡ್ಡಿ ತುಂಬಿದ್ದ ಲಾರಿ ಸ್ಫೋಟವಾಗಿ ಬಿಹಾರ ಮೂಲದ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಪೋಟದ ತೀವ್ರತೆಗೆ ಶವಗಳು ಛಿದ್ರ ಛಿದ್ರಗೊಂಡಿವೆ. ಸ್ಫೋಟದ ತೀವ್ರತೆಗೆ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಧೂಳು ಆವರಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ
72ರ ವೃದ್ಧನ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ: ಕಾನೂನು ಸಲಹೆ ಪಡೆಯಲು ಹೈಕೋರ್ಟ್ ಸೂಚನೆ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ