ಸಿಎಂ ಹೇಳಿಕೆ : ಜಮೀರ್ ಅಹಮದ್ ಗೆ ಬಿಸಿ ಮುಟ್ಟಿಸಿದ ಹೈಕಮಾಂಡ್
ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ದೃಢವಾಗಿ ಅಂಟಿಕೊಳ್ಳಬೇಕು...!
Team Udayavani, Jul 25, 2022, 8:07 PM IST
ಬೆಂಗಳೂರು : ಮುಂದಿನ ಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ತೀವ್ರ ಇರಿಸು ಮುರಿಸು ಉಂಟು ಮಾಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸೋಮವಾರ ಎಐಸಿಸಿ ತಾಕೀತು ಮಾಡಿ ನೋಟಿಸ್ ನೀಡಿದೆ.
ಮುಂದಿನ ಮುಖ್ಯಮಂತ್ರಿ ಹೇಳಿಕೆಗೆ ಸಂಬಂಧಿಸಿ ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚನೆ ನೀಡಲಾಗಿದೆ. ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಭವಿಷ್ಯದಲ್ಲಿ ಹೇಳಿಕೆ ನೀಡುವಾಗ ಎಚ್ಚರ ವಹಿಸಬೇಕು ಮತ್ತು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ದೃಢವಾಗಿ ಅಂಟಿಕೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.
‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ ಎಂಬ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಜಮೀರ್ ಸೆಡ್ಡು ಹೊಡೆದು ‘’ನನಗೆ ವ್ಯಕ್ತಿ ಪೂಜೆಯೂ ಮುಖ್ಯ, ಪಕ್ಷ ಪೂಜೆಯೂ ಮುಖ್ಯ’’ ಎಂದಿದ್ದರು. ”ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆಗೆ ಚಾಲನೆ ಕೊಟ್ಟಿದ್ದೇ ಡಿ.ಕೆ.ಶಿವಕುಮಾರ್. ಇದಾದ ಬಳಿಕ ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ” ಎಂದು ತಿರುಗೇಟು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು