ಕೃಷ್ಣಾ ತೀರದ ರೈತರಿಂದ ನೀರು, ವಿದ್ಯುತ್‌ ಸದ್ಬಳಕೆ


Team Udayavani, Feb 1, 2017, 3:45 AM IST

power.jpg

ಬಾಗಲಕೋಟೆ: ಶ್ರಮದಾನದ ಮೂಲಕ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರೇಜ್‌ ಕಟ್ಟಿ, ಇಡೀ ದೇಶದ ಗಮನ ಸೆಳೆದಿದ್ದ ಕೃಷ್ಣಾ ತೀರದ ರೈತರು, ಇದೀಗ ನೀರು ಮತ್ತು ವಿದ್ಯುತ್‌ ಸದ್ಬಳಕೆಗೆ ಮುಂದಾಗಿ ಮಾದರಿಯಾಗಿದ್ದಾರೆ.

ಜಮಖಂಡಿ ತಾಲೂಕು ಚಿಕ್ಕಪಡಸಲಗಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರು ನಿರ್ಮಿಸಿರುವ ಶ್ರಮಬಿಂದು ಸಾಗರ
ತುಂಬಿಸುವ ಕಾರ್ಯ ಯಶಸ್ವಿಯಾಗಿದೆ. ರೈತರೇ 90 ಲಕ್ಷ ದೇಣಿಗೆ ಸಂಗ್ರಹಿಸಿ ಬ್ಯಾರೇಜ್‌ ತುಂಬಿಸಿದ್ದು, ಸದ್ಯ 4 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ನೀರನ್ನು ಮಿತವಾಗಿ ಬಳಸುವ ಜತೆಗೆ ಬೇಸಿಗೆಯಲ್ಲಿ ನೀರಿನ ತೀವ್ರ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ವರವಾದ ಶ್ರಮಬಿಂದು ಸಾಗರ: ಈ ಬಾರಿ ರೈತರು ಶ್ರಮಬಿಂದು ಸಾಗರ ತುಂಬುವ ಯೋಜನೆ ಕೈಗೊಂಡಿದ್ದಾರೆ. ಕೃಷ್ಣಾ ತೀರದ ರೈತರ ಸಂಘದಡಿ ಹಣ ಸಂಗ್ರಹಿಸಿ, 30 ದಿನಗಳಲ್ಲಿ ಒಟ್ಟು 1.50 ಟಿಎಂಸಿ ಅಡಿ ನೀರನ್ನು ಶ್ರಮಬಿಂದು ಸಾಗರಕ್ಕೆ (ಆಲಮಟ್ಟಿ ಹಿನ್ನೀರು) ತುಂಬಿಸಲಾಗಿದೆ. ಸದ್ಯ ಬ್ಯಾರೇಜ್‌ನಲ್ಲಿ 4 ಟಿಎಂಸಿ ನೀರಿದ್ದು, ಏಪ್ರಿಲ್‌ವರೆಗೆ ಬರಲಿದೆ. ಇದೇ ಬ್ಯಾರೇಜ್‌ನಿಂದ ಜಮಖಂಡಿ, ರಬಕವಿ- ಬನಹಟ್ಟಿ, ಅಥಣಿ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದ್ದು, ಜಮಖಂಡಿ ತಾಲೂಕಿನ 26 ಹಳ್ಳಿ, ಅಥಣಿ ತಾಲೂಕಿನ 20 ಹಳ್ಳಿಗಳು ಸೇರಿ ಒಟ್ಟು 6 ಲಕ್ಷ ಜನರಿಗೆ ಕುಡಿಯುವ ನೀರಿಗೂ ಯಾವುದೇ ಸಮಸ್ಯೆ ಆಗುವುದಿಲ್ಲ.

ಕೊಯ್ನಾ ನೀರು ಬೇಕಿಲ್ಲ: ಟಿಎಂಸಿಗೆ 2 ಕೋಟಿ ರೂ. ಪಾವತಿಸಿ, ಮಹಾರಾಷ್ಟ್ರದ ಕೊಯ್ನಾ ನೀರು ಬಿಡಿಸಿಕೊಳ್ಳುವ
ಪ್ರಮೇಯವೂ ಈ ಬಾರಿ ಇಲ್ಲ. ಕಳೆದ 12 ವರ್ಷಗಳಲ್ಲಿ ಒಟ್ಟು 8 ಬಾರಿ ಮಹಾರಾಷ್ಟ್ರದಿಂದ ನೀರು ಪಡೆಯಲು ರಾಜ್ಯ ಸರ್ಕಾರ ಅಂದಾಜು 25 ಕೋಟಿ ಕೊಟ್ಟಿದೆ. ರೈತರೇ ಕಟ್ಟಿ, ನೀರು ತುಂಬುವ ಯೋಜನೆ ಕೈಗೊಂಡಿದ್ದರಿಂದ ಈ ಬಾರಿ ಸರ್ಕಾರದ ಬೊಕ್ಕಸಕ್ಕೆ 2 ಕೋಟಿ ಉಳಿಯಲಿದೆ. ಜೊತೆಗೆ ಬರದಿಂದಲೂ ಪಾರಾಗಲು ರೈತರ ಈ ಯತ್ನ ವರವಾಗಿದೆ. 

ಉಳಿತಾಯ ಹೇಗೆ?
ಚಿಕ್ಕಪಡಸಲಗಿಯ ಶ್ರಮಬಿಂದು ಸಾಗರದ ಹಿನ್ನೀರು ವ್ಯಾಪ್ತಿಯಲ್ಲಿ ಸದ್ಯ 70 ಸಾವಿರ ಎಕರೆ ನೀರಾವರಿ ಪ್ರದೇಶವಿದೆ. ಇಲ್ಲಿ 4200 ವಿದ್ಯುತ್‌ ಪಂಪ್‌ಸೆಟ್‌ ಗಳಿವೆ. ಇವು ನಿತ್ಯವೂ ಚಾಲ್ತಿ ಇದ್ದರೆ, 3 ತಿಂಗಳಲ್ಲಿ ನೀರು ಖಾಲಿಯಾಗುತ್ತದೆ. ಹೀಗಾಗಿ ವಾರದಲ್ಲಿ ಒಂದು ದಿನ(ಪ್ರತಿ ಭಾನುವಾರ) ವಿದ್ಯುತ್‌ ಪಂಪ್‌ ಸೆಟ್‌ ಸ್ಥಗಿತಗೊಳಿಸಿ, ನೀರು, ವಿದ್ಯುತ್‌ ಉಳಿಸುವ
ಕೆಲಸವನ್ನು 4 ವಾರಗಳಿಂದ ರೈತರು ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಅಂದಾಜು 0.9 ಟಿಎಂಸಿ ನೀರು ಉಳಿತಾಯವಾಗಿದೆ. ತಿಂಗಳಿಗೆ ಬರೋಬ್ಬರಿ 8.82 ಲಕ್ಷ ಯೂನಿಟ್‌ ವಿದ್ಯುತ್‌ ಉಳಿತಾಯವಾಗಿದೆ. 

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.