ಕಾರವಾರ: ಹಡಗಿನಲ್ಲಿದ್ದ ಖ್ಯಾತ ವಿಜ್ಞಾನಿಗಳು ಸೇರಿದಂತೆ 36 ಜನರ ರಕ್ಷಣೆ
ಇಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ಹಡಗು
Team Udayavani, Jul 27, 2023, 5:12 PM IST
ಕಾರವಾರ: ಇಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ್ದ ಎಂಟು ಖ್ಯಾತ ವಿಜ್ಞಾನಿಗಳು ಸೇರಿದಂತೆ 36 ಜನರಿದ್ದ ಸಿಎಸ್ಐಆರ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ (NIO)ಸಂಶೋಧನಾ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ (ICG) ಸಿಬಂದಿಗಳು ಗುರುವಾರ ರಕ್ಷಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
”ಆರ್ವಿ ಸಿಂಧು ಸಾಧನಾ ಹೆಸರಿನ ಹಡಗು ಇಂಜಿನ್ ವೈಫಲ್ಯವನ್ನು ಹೊಂದಿತ್ತು. ಕಾರವಾರದ ಸಮೀಪದಲ್ಲಿ ಅಪಾಯಕಾರಿಯಾಗಿ ಚಲಿಸುತ್ತಿತ್ತು ಮತ್ತು ದೊಡ್ಡ ತೈಲ ಸೋರಿಕೆಗೆ ಕಾರಣವಾಗಬಹುದು ಎಂದು ಸಂಕಷ್ಟದ ಸಂಕೇತವನ್ನು ಸ್ವೀಕರಿಸಿದಾಗ ಕಡಲ ತೀರದಿಂದ ಸುಮಾರು 20 ನಾಟಿಕಲ್ ಮೈಲುಗಳಷ್ಟು ದೂರದಲ್ಲಿತ್ತು” ಎಂದು ಹಿರಿಯ ಕೋಸ್ಟ್ ಗಾರ್ಡ್ ಅಧಿಕಾರಿ ತಿಳಿಸಿದ್ದಾರೆ.
”ಅತ್ಯಾಧುನಿಕ ಸಂಶೋಧನಾ ನೌಕೆಯು ಎಂಟು ಹಿರಿಯ ವಿಜ್ಞಾನಿಗಳು, ಮೌಲ್ಯಯುತ ವೈಜ್ಞಾನಿಕ ಉಪಕರಣಗಳು ಮತ್ತು ಸಂಶೋಧನಾ ಮಾಹಿತಿ ಸೇರಿದಂತೆ 36 ಜನರನ್ನು ಹೊತ್ತೊಯ್ಯುತ್ತಿದ್ದರಿಂದ ಪರಿಸ್ಥಿತಿ ಗಂಭೀರವಾಗಿತ್ತು” ಎಂದು ಅವರು ಹೇಳಿದರು.
”ಪರಿಸರ ಸೂಕ್ಷ್ಮ ಕಾರವಾರ ಕರಾವಳಿ ತೀರದಲ್ಲಿ ಅಪಾಯ, ತೈಲ ಸೋರಿಕೆಗೆ ಕಾರಣವಾಗಿ ಸಮುದ್ರ ಪರಿಸರಕ್ಕೆ ವಿನಾಶಕಾರಿ ಮಾಲಿನ್ಯಕ್ಕೆ ಕಾರಣವಾಗುವ ಸಾಧ್ಯತೆ ಇತ್ತು” ಎಂದು ತಿಳಿಸಿದ್ದಾರೆ.
”ಸವಾಲಿನ ಹವಾಮಾನ ಪರಿಸ್ಥಿತಿಗಳ ಹೊರತಾಗಿಯೂ, ICG ತಂಡವು ಸುರಕ್ಷಿತವಾಗಿ ಗೋವಾಕ್ಕೆ ಹಡಗನ್ನು ಎಳೆದುಕೊಂಡು ತರಲು ರಕ್ಷಣ ಕಾರ್ಯಾಚರಣೆಯನ್ನು ನಡೆಸಿತು. ಹಡಗಿನಲ್ಲಿರುವ ಎಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಸದೃಢರಾಗಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು