ನೀತಿ ಸಂಹಿತೆ ಸಡಿಲ ಆಡಳಿತಕ್ಕೆ ಚುರುಕು

ಕುಡಿವ ನೀರಿಗಾಗಿ ಕ್ರಮಕೈಗೊಳ್ಳಲು ಸೂಚನೆ

Team Udayavani, Apr 25, 2019, 6:00 AM IST

33

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ, ನೀತಿ ಸಂಹಿತೆಯಿಂದಾಗಿ ಬಾಕಿ ಉಳಿದಿದ್ದ ಕೆಲಸಗಳಿಗೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ರಾಜ್ಯದಲ್ಲಿ ಬರಪರಿಸ್ಥಿತಿ ತೀವ್ರವಾಗಿದ್ದು, ತ್ವರಿತವಾಗಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಬೇಕಿದೆ. ಇದಕ್ಕಾಗಿಯೇ ಈಗಾಗಲೇ ರಚಿಸಲಾಗಿರುವ ಕಾರ್ಯಪಡೆಗಳಿಗೆ ಸಮ ರೋಪಾದಿಯಲ್ಲಿ ಕೆಲಸ ಮಾಡುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಬುಧವಾರ ಕೃಷ್ಣ ಬೈರೇಗೌಡ ಅವರು, ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಒಳಗೊಂಡಂತೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದಾರೆ. ರಾಜ್ಯದ 176 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ತುರ್ತಾಗಿ ನೀರು ಪೂರೈಕೆ ವ್ಯವಸ್ಥೆಗೆ ಅಗತ್ಯವಾದ ಕ್ರಮ ಕೈಗೊ ಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಏ. 23ರ ನಂತರ ಅಗತ್ಯ ಕಾಮಗಾರಿಗಳಿಗೆ ಟೆಂಡರ್‌ ಆಹ್ವಾನಿಸಿ ಕಾರ್ಯಾದೇಶ ನೀಡಲು ಹಾಗೂ ಕಾಮಗಾರಿ ಜಾರಿಗೊಳಿಸಲು ಚುನಾವಣಾ ಆಯೋಗ ಒಪ್ಪಿಗೆ ನೀಡಿರುವುದರಿಂದ ತ್ವರಿತವಾಗಿ ಅಲ್ಪಾವಧಿ ಟೆಂಡರ್‌ಗಳನ್ನು ಆಹ್ವಾನಿಸಿ ಕುಡಿಯುವ ನೀರಿನ ಕಾಮಗಾರಿಗಳನ್ನು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಡೆ ಹೊಸದಾಗಿ ಕೊಳವೆ ಬಾವಿ ಕೊರೆಯುವ ಅಗತ್ಯತೆ ಪರಿಗಣಿಸಿ ಪ್ರತಿ ತಾಲೂಕಿಗೆ ಒಂದು ಅಥವಾ ಎರಡು ಕೊಳವೆ ಬಾವಿ ಕೊರೆಯುವ ಏಜೆನ್ಸಿಗಳನ್ನು ಟೆಂಡರ್‌ ಮೂಲಕ ಗುರುತಿಸಲಾಗುತ್ತಿದೆ. ಅವಧಿಯನ್ನು 15 ತಿಂಗಳಿಗೆ ಸಿದ್ಧಪಡಿಸುವಂತೆ ಕೊಳವೆ ಬಾವಿಗಳಿಂದ ಸಂಪರ್ಕ ಕಲ್ಪಿಸಲು ಡಿ.ಸಿ.ಗಳ ಬಳಿಯಿರುವ ಎನ್‌ಡಿಆರ್‌ಎಫ್/ ಎಸ್‌ಡಿಆರ್‌ಎಫ್ ಅಥವಾ ಗ್ರಾಮ ಪಂಚಾಯಿತಿಗಳ ಅನುದಾನ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಹಣ ಸಾಕಾಗದಿದ್ದರೆ ಟಾಸ್ಕ್ಫೋರ್ಸ್‌ಗಳಿಗೆ ಒದಗಿಸಲಾದ ಅನುದಾನ ಬಳಸಿಕೊಳ್ಳುವಂತೆಯೂ ತಿಳಿಸಲಾಗಿದೆ. ಅಲ್ಲದೇ ಈ ಸಂಬಂಧ ಅಗತ್ಯ ಸುತ್ತೋಲೆಯನ್ನೂ ಹೊರಡಿಸಲಾಗಿದೆ ಎಂದು ಹೇಳಿದರು.

ಅಧಿಕಾರಿಗಳೇ ಹೊಣೆ
ಒಣಗಿದ ಕೊಳವೆ ಬಾವಿಗಳ ಸಾಮಗ್ರಿಗಳನ್ನು ಶೇಖರಿಸಿ ಹೊಸ ಕೊಳವೆ ಬಾವಿಗಳಿಗೆ ಬೇಕಾದ ಪಂಪ್‌ಸೆಟ್, ಜಿಐ ಪೈಪ್‌ ಹಾಗೂ ಕೇಬಲ್ಗಳನ್ನು ಕಡ್ಡಾಯವಾಗಿ ಉಪಯೋಗಿಸುವಂತೆ ಸೂಚಿಸಲಾಗಿದೆ. ಹಳೆಯ ವಿದ್ಯುತ್‌ ಸಂಪರ್ಕವನ್ನು ಹೊಸ ಸಂರ್ಪಕ್ಕೆ ವರ್ಗಾಯಿಸುವಂತೆಯೂ ಸೂಚನೆ ನೀಡಲಾಗಿದೆ. ಆ ಮೂಲಕ ಅನಗತ್ಯ ದುಂದುವೆಚ್ಚ ತಡೆಗೆ ಕ್ರಮ ವಹಿಸಲಾಗಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ರೀತಿಯ ಲೋಪ ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.