“ಕಾಫಿ ಡೇ’ ಅಂಗ ಸಂಸ್ಥೆ ಡಾರ್ಕ್‌ ಫಾರೆಸ್ಟ್‌ ಫರ್ನಿಚರ್‌ಗೆ ಬೀಗ


Team Udayavani, Nov 26, 2019, 3:06 AM IST

coffee-daya

ಚಿಕ್ಕಮಗಳೂರು: ಪ್ರಖ್ಯಾತ “ಕಾಫಿ ಡೇ’ಯ ಅಂಗಸಂಸ್ಥೆ ಡಾರ್ಕ್‌ ಫಾರೆಸ್ಟ್‌ ಫರ್ನಿಚರ್‌ (ಡ್ಯಾಪ್ಕೋ) ಕಂಪನಿಗೆ ಸೋಮವಾರ ಶಾಶ್ವತವಾಗಿ ಬೀಗ ಹಾಕಲಾಗಿದೆ. “ಕಾಫಿ ಡೇ’ ಸಂಸ್ಥಾಪಕ ಸಿದ್ದಾರ್ಥ್ ಹೆಗಡೆ ಸಾವಿನ ನಂತರ ಸಂಸ್ಥೆ ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದಾಗಿ ಕಾರ್ಮಿಕರು ಪರದಾಡುವಂತಾಗಿದೆ.

“ಕಾಫಿ ಡೇ ಗ್ಲೋಬಲ್‌’ ಮುಂಭಾಗದ ಗೇಟಿನ ಮೇಲೆ ಸಂಸ್ಥೆಯನ್ನು ಮುಚ್ಚಿರುವ ಕುರಿತು ನೋಟಿಸ್‌ ಅಂಟಿಸಲಾಗಿದೆ. ಇಲ್ಲಿ ಕೆಲಸ ಮಾಡುತ್ತಿದ್ದ 66 ಜನರನ್ನು ಏಕಾಏಕಿ ಕರ್ತವ್ಯದಿಂದ ತೆಗೆದು ಹಾಕಲಾಗಿದೆ. ಸೋಮವಾರ ಎಂದಿನಂತೆ ಕರ್ತವ್ಯಕ್ಕೆ ಬಂದಿದ್ದ 68 ಜನರನ್ನು ಗೇಟಿನ ಬಳಿಯೇ ತಡೆದ ಸೆಕ್ಯುರಿಟಿ ಗಾರ್ಡ್‌ಗಳು, ನಿಮ್ಮನ್ನು ಕೆಲಸದಿಂದ ತೆಗೆಯಲಾಗಿದೆ. ಒಳಗೆ ಬಿಡದಂತೆ ಆದೇಶ ಬಂದಿದೆ ಎಂದು ತಿಳಿಸಿದರು.

ಕೆಲಸ ಕಳೆದುಕೊಂಡ ಕಾರ್ಮಿಕರು ಗೇಟಿನ ಮುಂಭಾಗ ಬೆಳಗಿನಿಂದ ಸಂಜೆಯವರೆಗೂ ಮೌನ ಪ್ರತಿಭಟನೆ ನಡೆಸಿದರು. ಕೆಲವರು ಕೆಲಸದಿಂದ ಏಕಾಏಕಿ ತೆಗೆದುಹಾಕಿರುವ ಕುರಿತು ಕಾರ್ಮಿಕ ಇಲಾಖೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದರು. ಕಾರ್ಮಿಕ ಕಾಯ್ದೆಯಂತೆ ಕೆಲಸದಿಂದ ತೆಗೆಯುವ ತಿಂಗಳ ಮುಂಚೆಯೇ ನೋಟಿಸ್‌ ನೀಡಬೇಕು. ಆದರೆ, ನಮಗೆ ಯಾವುದೇ ನೋಟಿಸ್‌ ನೀಡದೆ ಕೆಲಸದಿಂದ ತೆಗೆದು ಹಾಕಲಾಗಿದೆ.

ಇದರಿಂದಾಗಿ ನಾವು ಮತ್ತು ನಮ್ಮ ಕುಟುಂಬ ಬೀದಿಗೆ ಬೀಳುವಂತಾಗಿದೆ ಎಂದು ಕಾರ್ಮಿಕರು ದೂರಿನಲ್ಲಿ ತಿಳಿಸಿದ್ದಾರೆ. ಕೆಲಸದಿಂದ ತೆಗೆದಿರುವ ಹಿನ್ನೆಲೆಯಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲು ಕೆಲವರು ಸಲಹೆ ನೀಡಿದರೂ, ಅದಕ್ಕೆ ಒಪ್ಪದ ಕಾರ್ಮಿಕರು ತಾವು ಪ್ರತಿಭಟನೆ ನಡೆಸಿ ಸಂಸ್ಥೆಯ ವಿರುದ್ಧ ಘೋಷಣೆ ಕೂಗಿದರೆ ಅದು ಸಿದ್ದಾರ್ಥ್ ಹೆಗಡೆ ಅವರಿಗೆ ಅಪಮಾನ ಮಾಡಿದಂತಾಗುತ್ತದೆ. ಆದ ಕಾರಣ ಮೌನ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಬೆಳಗಿನಿಂದ ಸಂಜೆಯವರೆಗೂ ಕಾರ್ಮಿಕರು ಗೇಟಿನ ಮುಂಭಾಗದಲ್ಲಿಯೇ ಇದ್ದರೂ ಯಾವುದೇ ಹಿರಿಯ ಅಧಿಕಾರಿಗಳು ಕಾರ್ಮಿಕರನ್ನು ಭೇಟಿ ಮಾಡಲಿಲ್ಲ. ಈ ನಡುವೆ ಸಂಸ್ಥೆಯನ್ನು ಮುಚ್ಚುತ್ತಿರುವ ಕುರಿತು ಆಡಳಿತ ಮಂಡಳಿ ನೋಟಿಸ್‌ ನೀಡಿದ ಪ್ರತಿಯನ್ನು ಪೊಲೀಸರಿಗೂ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಚೇರಿ ಮುಂಭಾಗದಲ್ಲಿ ಪೊಲೀಸ್‌ ಭದ್ರತೆ ಹಾಕಲಾಗಿತ್ತು.

ಇಬ್ಬರಿಗೂ ನೋಟಿಸ್‌: ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಕಾರ್ಮಿಕ ಆಯುಕ್ತ ಕೆ.ಜಿ.ಜಾನ್ಸನ್‌, “ಡ್ಯಾಪ್ಕೋ’ ಪೀಠೊಪಕರಣ ತಯಾರಿಕಾ ಘಟಕದಲ್ಲಿ 66 ಮಂದಿ ಕೆಲಸಗಾರರಿಗೆ ಸೋಮವಾರದಿಂದ ಕೆಲಸಕ್ಕೆ ಬರಬಾರದೆಂದು ಆಡಳಿತ ಮಂಡಳಿ ತಿಳಿಸಿದೆ.

ಇದರಿಂದ ಆತಂಕಗೊಂಡ ಕೆಲಸಗಾರರು ಕಾರ್ಮಿಕ ಇಲಾಖೆಗೆ ಅರ್ಜಿ ಸಲ್ಲಿಸಿ, ಕಾಯ್ದೆ ಬದ್ಧವಾಗಿ ತಮಗೆ ಬರಬೇಕಾದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.2ರಂದು ಆಡಳಿತ ಮಂಡಳಿ ಹಾಗೂ ಕೆಲಸಗಾರರ ಸಭೆಯನ್ನು ಕಚೇರಿಯಲ್ಲಿ ಕರೆಯಲಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಮತ್ತು ಕಾರ್ಮಿಕರಿಬ್ಬರಿಗೂ ನೋಟಿಸ್‌ ಕಳುಹಿಸಲಾಗಿದೆ. ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಲು ಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಡ್ಯಾಪ್ಕೋ ಇತಿಹಾಸ: 8 ವರ್ಷದ ಹಿಂದೆ “ಕೆಫೆ ಕಾಫಿ ಡೇ’ ಅಂಗ ಸಂಸ್ಥೆಯಾಗಿ “ಡ್ಯಾಪ್ಕೋ’ ಕಂಪನಿಯನ್ನು ಉದ್ಯಮಿ ದಿ|ಸಿದ್ದಾರ್ಥ್ ಹೆಗಡೆ ಪ್ರಾರಂಭಿ ಸಿದ್ದರು. ಕಾಫಿ ಡೇ ಕಂಪನಿ ಉತ್ತುಂಗದಲ್ಲಿದ್ದ ಸಂದರ್ಭ ರಾಜ್ಯ- ಹೊರ ರಾಜ್ಯ ಸೇರಿದಂತೆ ವಿದೇಶಗಳಲ್ಲಿ ಆರಂಭಿಸಲಾಗುವ “ಕಾಫಿ ಡೇ’ ಮಳಿಗೆ ಗಳಿಗೆ ಅಗತ್ಯವಿರುವ ಪೀಠೊಪಕರಣ ಗಳನ್ನು ಇಲ್ಲಿ ತಯಾರಿಸಿ ಕಳುಹಿಸಲಾಗುತ್ತಿತ್ತು.

ಪೀಠೊಪಕರಣ ತಯಾರಿಕೆಗೆ ಅಗತ್ಯವಿರುವ ಮರವನ್ನು ವಿದೇಶಗಳಿಂ ದಲೂ ತರಲಾಗುತ್ತಿತ್ತು. ಗಯಾನವುಡ್‌, ಸಿಲ್ವರ್‌ ಬೀಚ್‌, ರೋಸ್‌ ವುಡ್‌ ಸೇರಿ ಸ್ಥಳೀಯ ಅಕೇಷಿಯಾ ಸಿಲ್ವರ್‌ ಮರಗಳನ್ನು ಬಳಸಿಕೊಂಡು ಪೀಠೊ ಪಕರಣ ಗಳನ್ನು ತಯಾರಿಸಲಾಗುತ್ತಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.