ಒತ್ತಿನೆಣೆ ಗುಡ್ಡ ಕುಸಿತ: ಕಾರವಾರ-ಉಡುಪಿ ಸಂಚಾರ ಸ್ಥಗಿತ
Team Udayavani, Jun 7, 2017, 8:55 AM IST
ಬೈಂದೂರು: ಇಲ್ಲಿನ ಒತ್ತಿನೆಣೆ ಬಳಿ ಬುಧವಾರ ನಸುಕಿನ 4.30 ರ ವೇಳೆಗೆ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಬಿದ್ದು ನಿರಂತರ 5 ಗಂಟೆಗಳ ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ನಡೆದಿದೆ.
ಹೆದ್ದಾರಿ ಕಾಮಾಗಾರಿಗಾಗಿ ಗುಡ್ಡ ಕೊರೆಯಲಾಗಿದ್ದು, ಭಾರೀ ಮಳೆಯಿಂದಾಗಿ ಕುಸಿದು ಬಿದ್ದ ಪರಿಣಾಮ ಬೆಳಗ್ಗಿನಿಂದ ನೂರಾರು ವಾಹನ ಸವಾರರು ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು.
ತೆರವು ಕಾರ್ಯಕ್ಕೆ ಮೀನ ಮೇಷ !
ಗುಡ್ಡ 4.30 ರ ವೇಳೆಗ ಕುಸಿದು ಬಿದ್ದರೆ ಸ್ಥಳಕ್ಕೆ ಕೇವಲ 3 ಜೆಸಿಬಿಗಳೊಂದಿಗೆ 7.30 ಕ್ಕೆ ಆಗಮಿಸಿ ತೆರವು ಕಾರ್ಯ ಆರಂಭಿಸಲಾಗಿದೆ. ಇದು ನೂರಾರು ವಾಹನ ಸವಾರರ ಆಕ್ರೋಶಕ್ಕೆ ಕಾರವಾಯಿತು. ಮಣ್ಣು ತೆರವು ಮಾಡಿ 9.30 ರ ವೇಳೆ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಭಟ್ಕಳ ಕಡೆ ಯಿಂದ ಬರುತ್ತಿರುವ ಮತ್ತು ತೆರಳುತ್ತಿರುವ ಬಸ್ಗಳು ಸೇರಿದಂತೆ ನೂರಾರು ವಾಹನಗಳ ಸವಾರರು ಪರದಾಡಬೇಕಾಯಿತು.
ಉದಯವಾಣಿ ಅಪಾಯದ ಎಚ್ಚರಿಕೆ ನೀಡಿತ್ತು
ಜೂನ್ 5 ರಂದು ಉದಯವಾಣಿ ಈ ಬಗ್ಗೆ ವರದಿ ಪ್ರಕಟಿಸಿ ಅಪಾಯದ ಎಚ್ಚರಿಕೆ ನೀಡಿತ್ತು. ಅದೃಷ್ಟವಷಾತ್ ಬೆಳಗಿನ ಜಾವ ಗುಡ್ಡ ಕುಸಿದಿರುವ ಹಿನ್ನಲೆಯಲ್ಲಿ ಸಂಚಾರ ವಿರಳವಾಗಿದ್ದ ಕಾರಣ ಯಾವುದೇ ವಾಹನ ಸಿಲುಕಿಲ್ಲ.
ಸ್ಥಳೀಯರ ಆಕ್ರೋಶ
ಈ ಬಗ್ಗೆ ಸ್ಥಳೀಯರು ಹೋರಾಟ ನಡೆಸಿದ್ದು, ಕಾಮಾಗಾರಿ ಕಳಪೆ ಮಾಡಲಾಗಿದ್ದು,ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿ ಅಧಿಕಾರಿಗಳು ಬೇಜಾವಾಬ್ಧಾರಿತನ ತೋರಿದ್ದು ಹೀಗಾಗಿದೆ ಎಂದು ಆರೋಪಿಸಿದ್ದಾರೆ. ಹೆದ್ದಾರಿ ಕಾಮಗಾರಿಯ ಕುರಿತು ಹಲವರು ತೀವ್ರ ಅಸಮಧಾನ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ