ಕಪ್ಪು ಶಿಲೀಂಧ್ರದಂತ ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ?ಎಚ್ ಡಿಕೆ ಪ್ರಶ್ನೆ


Team Udayavani, May 22, 2021, 1:00 PM IST

hdk

ಬೆಂಗಳೂರು: ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ ಆಂಫೊಟೆರಿಸಿನ್ ಬಿ ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ ಆಂಫೊಟೆರಿಸಿನ್ ಬಿ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಬ್ಲಾಕ್ ಫಂಗಸ್ ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಸುಧಾಕರ್

ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ ‘ಇಲ್ಲ’ ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ. ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ಉದಾ: ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್‌ ಮೋಸ. ಕಪ್ಪು ಶಿಲೀಂದ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ ಎಂದು ಎಚ್ ಡಿಕೆ ಆರೋಪಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಅವರು ಸರ್ಕಾರಕ್ಕೆ  ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.