ಮರಳಿ ಬನ್ನಿ ಕಾಲೇಜಿಗೆ


Team Udayavani, Jun 24, 2021, 6:50 AM IST

ಮರಳಿ ಬನ್ನಿ ಕಾಲೇಜಿಗೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಖ್ಯಾತ ವೈದ್ಯ ಡಾ| ದೇವಿ ಶೆಟ್ಟಿ ಅವರ ಸಮಿತಿ ನೀಡಿರುವ  ಶಿಫಾರಸಿನ ಅನ್ವಯ ಶಾಲೆ ಕಾಲೇಜುಗಳನ್ನು ಆರಂಭಿಸಲು “ಮರಳಿ ಬನ್ನಿ ಕಾಲೇಜಿಗೆ’ ಅಭಿಯಾನಕ್ಕೆ ರಾಜ್ಯ ಸರಕಾರ ಮುಂದಾಗಿದೆ.

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳನ್ನು ಆದ್ಯತಾ ವಲಯಕ್ಕೆ ಸೇರಿಸಿ ಕೊರೊನಾ ನಿರ್ಬಂಧಕ ಲಸಿಕೆ ನೀಡಿದ ಬಳಿಕ ಕಾಲೇಜುಗಳನ್ನು ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಚರ್ಚಿಸಿ ನಿರ್ಧಾರಕ್ಕೆ ಬರಲಿವೆ. ಮೊದಲು ಉನ್ನತ ಶಿಕ್ಷಣ, ಅನಂತರ ಪ್ರೌಢಶಾಲೆ, ಹೀಗೆ ಹಂತ ಹಂತವಾಗಿ ಆರಂಭಿಸಬೇಕಾಗುತ್ತದೆ. ಸಣ್ಣ ಮಕ್ಕಳಿಗೆ ಈಗಲೇ ಶಾಲೆ ಆರಂಭಿಸುವ ಧಾವಂತ ಇಲ್ಲ ಎಂದೂ ಸರಕಾರ ಹೇಳಿದೆ.

ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರು ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅನಂತರ ವಿಧಾನಸೌಧ ಬಳಿ ಸುದ್ದಿಗಾರರ ಬಳಿ ಮಾತನಾಡಿ, ಜುಲೈಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ಡಾ| ದೇವಿ ಶೆಟ್ಟಿ ನೇತೃತ್ವದ ಸಮಿತಿಯು ಮೊದಲು ಕಾಲೇಜು ತೆರೆಯಲು ಶಿಫಾರಸು ಮಾಡಿದೆ. ಆದ್ದರಿಂದ ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಮೂರನೇ ಅಲೆಯ ಮುನ್ನೆಚ್ಚರಿಕೆಯೂ ಸೇರಿ ಎಲ್ಲ ಅಂಶಗಳನ್ನು ಒಳಗೊಂಡ ವರದಿ ಪ್ರಕಾರವೇ ನಡೆದು ಕೊಳ್ಳಲಾಗುವುದು. ಕೇಂದ್ರ ಸರಕಾರ ನೀಡುವ ಮಾರ್ಗಸೂಚಿಗೆ  ಕಾಯುತ್ತಿದ್ದೇವೆ ಎಂದರು.

ವಿದ್ಯಾರ್ಥಿಗಳು ಆದ್ಯತಾ ಗುಂಪಿಗೆ :

ಈಗಾಗಲೇ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡುವ ಕೆಲಸ ನಡೆಯುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳನ್ನು ಆದ್ಯತಾ ಗುಂಪಿಗೆ ಸೇರಿಸಿ ವ್ಯಾಕ್ಸಿನ್‌ ನೀಡಲಾಗುವುದು ಎಂದು ತಿಳಿಸಿದರು.

45 ದಿನದಲ್ಲಿ ಅನುಷ್ಠಾನ :

ಮೂರನೇ ಅಲೆ ನಿರ್ವಹಣೆ ತಜ್ಞರ ಸಲಹಾ ಸಮಿತಿ ಡಾ| ದೇವಿ ಶೆಟ್ಟಿ ತಂಡ ಮಂಗಳವಾರ ನೀಡಿರುವ ಪ್ರಾಥಮಿಕ ವರದಿಯನ್ನು ರಾಜ್ಯ ಸಚಿವರ ಕೊರೊನಾ ಸಮಿತಿಯಲ್ಲಿ ಚರ್ಚಿಸಲಾಗುವುದು. ಬಳಿಕ ಅಂತಿಮ ನಿರ್ಧಾರ ಕೈಗೊಂಡು 45 ದಿನಗಳೊಳಗೆ ಎಲ್ಲ ಜಿಲ್ಲೆಗಳ ಲ್ಲಿಯೂ ತಜ್ಞರ ಶಿಫಾರಸುಗಳನ್ನು ಅನುಷ್ಠಾನಿಸಲಾಗು ವುದು ಎಂದು ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯು ಮುಖ್ಯಮಂತ್ರಿಗಳ ಸಭೆಯಲ್ಲಿ ಸಲಹೆ ನೀಡಿತ್ತು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಮತ್ತೆ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಕ್ಷೇಮ ಸರಕಾರದ ಮೊದಲ ಆದ್ಯತೆಯಾಗಿದೆ. ಆದ್ದರಿಂದ ಲಸಿಕೆ ಕೊಟ್ಟೇ ಕಾಲೇಜು ಆರಂಭಿಸಬೇಕೆಂದರೆ ಯಾವ ರೀತಿ, ಎಷ್ಟು ದಿನದೊಳಗೆ ಲಸಿಕಾ ಕಾರ್ಯಕ್ರಮ ಮಾಡಬೇಕೆಂದು ಚರ್ಚಿಸಲಾಗುವುದು ಎಂದರು.

ಕಾಲೇಜಿನಲ್ಲಿಯೇ ಲಸಿಕೆ: ಮಂಗಳೂರು ವಿ.ವಿ. :

ಮಂಗಳೂರು: ಕಾಲೇಜು ಆರಂಭಿಸಲು ಸರಕಾರ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ 207 ಸಂಯೋಜಿತ ಕಾಲೇಜುಗಳಲ್ಲಿಯೇ ಜುಲೈ 15ರ ಒಳಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ತಿಳಿಸಿದ್ದಾರೆ.

“ಉದಯವಾಣಿ’ ಜತೆ ಮಾತನಾಡಿದ ಅವರು, ಕಾಲೇಜು ಆರಂಭಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳು ಭೌತಿಕವಾಗಿ ತರಗತಿಗೆ ಹಾಜರಾಗುವ ಮುನ್ನ ಕನಿಷ್ಠ 1 ಡೋಸ್‌ ಲಸಿಕೆಯನ್ನು ತೆಗೆದುಕೊಂಡಿರಬೇಕು. ಈ ನೆಲೆಯಲ್ಲಿ ಆಯಾ ಕಾಲೇಜುಗಳು ವಿಶೇಷ ಆಸ್ಥೆ ವಹಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಜುಲೈ 3ನೇ ವಾರ ಎಸೆಸೆಲ್ಸಿ ಪರೀಕ್ಷೆ :

ಜುಲೈ ಮೂರನೇ ವಾರದಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಬುಧವಾರ ಪ್ರತ್ಯೇಕ ಪ್ರಮಾಣಿತ ಕಾರ್ಯ ವಿಧಾನವನ್ನು ಬಿಡುಗಡೆ ಮಾಡಲಾಗಿದೆ. ಇಡೀ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿರುವ ಸಿಬಂದಿ ಕೊರೊನಾ ಲಸಿಕೆ ಪಡೆದಿರಬೇಕು ಎಂದು ಇದರಲ್ಲಿ ಸೂಚಿಸಲಾಗಿದೆ. ಅಂದರೆ ಪರೀಕ್ಷೆ ವೇಳೆಗೆ ಕನಿಷ್ಠ ಒಂದು ಡೋಸ್‌ ಲಸಿಕೆಯನ್ನಾದರೂ ಪಡೆದಿರಬೇಕು. ಜತೆಗೆ ಆಯಾ ಸಂದರ್ಭಕ್ಕೆ ಅನುಗುಣವಾಗಿ ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ಅಥವಾ ಆರ್‌ಟಿಸಿಪಿಆರ್‌ ಪರೀಕ್ಷೆ ಮಾಡಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.