
ಕಾಲೇಜು ಆರಂಭಕ್ಕೆ ದಿನ ನಿಗದಿ: ನವೆಂಬರ್ 17ರಿಂದ ಕಾಲೇಜು ಆರಂಭಕ್ಕೆ ಸರ್ಕಾರ ಸಜ್ಜು
Team Udayavani, Oct 23, 2020, 12:26 PM IST

ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ಕೆಲವು ತಿಂಗಳಿನಿಂದ ಮುಚ್ಚಿರುವ ಇಂಜನಿಯರ್, ಡಿಪ್ಲೊಮಾ, ಪಿಜಿ, ಪದವಿ ಕಾಲೇಜುಗಳನ್ನು ನವೆಂಬರ್ 17ರಿಂದ ಮತ್ತೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪದವಿ ಕಾಲೇಜು ಪ್ರಾರಂಭಿಸುವ ಕುರಿತಂತೆ ಪ್ರಾತ್ಯಕ್ಷಿಕೆ ಮತ್ತು ಚರ್ಚೆ ನಡೆಸಿದ ನಂತರ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವಥನಾರಾಯಣ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಚಾರವನ್ನು ಸ್ಪಷ್ಟಪಡಿಸಿದರು.
ನವೆಂಬರ್ 17 ಕ್ಕೆ ಪದವಿ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧರಿಸಿದ್ದು, ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದ್ದು, ಆನ್ ಲೈನ್ ನಲ್ಲಿಯೂ ಕಲಿಯಬಹುದು. ಅಥವಾ ಕ್ಲಾಸಿಗೂ ಬರಬಹುದು. ಆದರೆ ಕ್ಲಾಸ್ ಗೆ ಬರಬೇಕಾದರೆ ವಿದ್ಯಾರ್ಥಿಗಳು ತಂದೆ ತಾಯಿಯಿಂದ ಪರವಾನಗಿ ಪತ್ರ ತರಬೇಕು ಎಂದರು.
ಮೊದಲು ಇಂಜನಿಯರ್, ಡಿಪ್ಲೊಮಾ, ಪಿಜಿ, ಪದವಿ ಕಾಲೇಜುಗಳು ತೆರೆಯಲು ನಿರ್ಧಾರ ಮಾಡಲಾಗಿದೆ. ಪ್ರ್ಯಾಕ್ಟಿಕಲ್ ತರಗತಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಇದನ್ನೂ ಓದಿ:ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲೂ ಜೆಇಇ ಮೈನ್: ಕನ್ನಡದಲ್ಲೂ ಸಿಗುತ್ತಾ ಅವಕಾಶ?
ಯುಜಿಸಿ ಗೈಡ್ ಲೈನ್ಸ್ ಪ್ರಕಾರ ನವೆಂಬರ್ ನಲ್ಲಿ ಆಫ್ ಲೈನ್ ಶಾಲೆ ತೆರೆಯಲು ಅವಕಾಶವಿತ್ತು. ಎಲ್ಲಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್, ಪ್ರತಿ ಶಾಲೆಯಲ್ಲಿಯೂ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುವುದು. ನವೆಂಬರ್ 17 ಕ್ಕೆ ಎಲ್ ಎಂಎಸ್ ಆನ್ ಲೈನ್ ಪೋರ್ಟಲ್ ಉದ್ಘಾಟನೆಯಾಗಲಿದೆ. ದೇಶದಲ್ಲಿಯೇ ಮೊದಲ ಬಾರಿ ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.
ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ediga ಸಮಾವೇಶ;ದಾರಿ ತಪ್ಪಿಸುವವರ ಮಾತು ಕೇಳುತ್ತಿರುವ ಸಿದ್ದರಾಮಯ್ಯ:ಶ್ರೀನಾಥ್

Actress Leelavathi; ತನ್ನದೇ ತೋಟದಲ್ಲಿ ಚಿರ ನಿದ್ರೆಗೆ ಜಾರಿದ ಲೀಲಾವತಿ ಅಮ್ಮ

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ
MUST WATCH
ಹೊಸ ಸೇರ್ಪಡೆ

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್