ನಾನು ಮಾರಾಟವಾಗಿದ್ದೇನೆಂದು ಚಾಮುಂಡಿಬೆಟ್ಟಕ್ಕೆ ಬಂದು ಸತ್ಯ ಮಾಡಿ
Team Udayavani, Oct 16, 2019, 3:00 AM IST
ಮೈಸೂರು: ಸಮ್ಮಿಶ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಸಿಡಿದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದ ಮೇಲೆ ನನ್ನನ್ನು 25 ಕೋಟಿಗೆ ಬಿಜೆಪಿಗೆ ಮಾರಿಕೊಂಡಿದ್ದೇನೆ ಎನ್ನುವ ಮಾಜಿ ಸಚಿವ ಸಾ.ರಾ.ಮಹೇಶ್, ನನ್ನನ್ನು ಕೊಂಡುಕೊಂಡವನನ್ನು ಗುರುವಾರ ಬೆಳಗ್ಗೆ 9ಗಂಟೆಗೆ ಚಾಮುಂಡಿಬೆಟ್ಟಕ್ಕೆ ಕರೆ ತಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸತ್ಯ ಮಾಡಲಿ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಸವಾಲು ಹಾಕಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರದ ದೌರ್ಜನ್ಯದ ವಿರುದ್ಧ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದ 17 ಶಾಸಕರಲ್ಲಿ ಬಹುತೇಕರು 500, ಸಾವಿರ ಕೋಟಿಗೆ ಲೆಕ್ಕ ಕೊಟ್ಟವರು. ನಾನೇನು ರಿಯಲ್ ಎಸ್ಟೇಟ್, ಗಣಿದಂಧೆ ಮಾಡಿಲ್ಲ. ನಾನು ರೈತನ ಮಗ. ನನ್ನ ಮನೆಗೆ ಹತ್ತು ಜನ ಬಂದರೆ ಕುಳಿತುಕೊಳ್ಳಲು ಕಷ್ಟ. ಈ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಬದುಕಲು ಪ್ರಯತ್ನಿಸುತ್ತಿರುವವರಲ್ಲಿ ನಾನೂ ಒಬ್ಬ.
ಈ ಕಾರಣಕ್ಕಾಗಿಯೇ ಐಟಿ, ಇ.ಡಿಯವರು ನಮ್ಮ ಮನೆ ಹತ್ತಿರ ಬರಲಾಗಲ್ಲ. ಆದರೆ, ಮಹೇಶ್ ಅವರು, ಪದೇ ಪದೆ ವಿಶ್ವನಾಥ್ 25 ಕೋಟಿಗೆ ಬಿಜೆಪಿಗೆ ಮಾರಿಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಹಾಗಾಗಿ, ನನ್ನನ್ನು ಕೊಂಡುಕೊಂಡವನನ್ನು ಚಾಮುಂಡಿಬೆಟ್ಟಕ್ಕೆ ಕರೆ ತನ್ನಿ. ಸತ್ಯ ಆಗಿ ಬಿಡಲಿ. ಗುರುವಾರ ಚಾಮುಂಡಿಬೆಟ್ಟಕ್ಕೆ ಬರದಿದ್ದರೆ ಈ ಬಗ್ಗೆ ಇನ್ನು ಮಾತನಾಡಬಾರದು ಎಂದು ಮಹೇಶ್ಗೆ ತಾಕೀತು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ