ನಾವು ನೀರು ತರುತ್ತೇವೆ ಎನ್ನುವುದು ಶುದ್ಧ ಸುಳ್ಳು!:ನಟ ರೈ
Team Udayavani, Jan 25, 2018, 12:37 PM IST
ಬೆಂಗಳೂರು: ‘ಮಹದಾಯಿ ವಿಚಾರದಲ್ಲಿ ಮೊದಲು ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಿ, ಪಕ್ಷದ ಸಿದ್ಧಾಂತಗಳನ್ನು ಬದಿಗಿಟ್ಟು ಒಂದೇ ವೇದಿಕೆಯಲ್ಲಿ ಜೊತೆಯಾಗಿ ಹೋರಾಟ ಮಾಡಿ’ ಎಂದು ನಟ ಪ್ರಕಾಶ್ ರೈ ಕರೆ ನೀಡಿದ್ದಾರೆ.
ಸಾಮಾಜಿಕ ತಾಣದಲ್ಲಿ ವಿಡಿಯೋದಲ್ಲಿ ಮಹದಾಯಿಗಾಗಿ ಬಂದ್ ವಿಚಾರದ ಕುರಿತು ಮಾತನಾಡಿರುವ ರೈ ‘ಮಹದಾಯಿ ನೀರು ಕನ್ನಡಿಗರ ಮೂಲಭೂತ ಹಕ್ಕು. ನಮ್ಮ ನೀರನ್ನು ನಾವು ಬಳಸಿಕೊಳ್ಳಬೇಕು’ ಎಂದಿದ್ದಾರೆ.
‘ಕೇಂದ್ರದಲ್ಲಿ ನಮ್ಮ ಪಕ್ಷ ವಿದೆ. ಆ ರಾಜ್ಯದಲ್ಲಿ ನಮ್ಮ ಪಕ್ಷವಿದೆ, ನಾವು ನೀರು ತರುತ್ತೇವೆ ಎನ್ನುವುದು ಶುದ್ಧ ಸುಳ್ಳು’ ಎಂದು ಬಿಜೆಪಿಗೆ ಟಾಂಗ್ ನೀಡಿದರು.
‘ರಾಜಕೀಯ ಪಕ್ಷಗಳು ಮೂಲಭೂತ ಹಕ್ಕುಗಳ ಮೇಲೆ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಿ . ವೋಟಿಗೊಸ್ಕರ ಭಿಕ್ಷೆ ಬೇಡುವುದನ್ನು ಬಿಡಿ’ ಎಂದು ಕಿಡಿ ಕಾರಿದರು.
‘ಎಲ್ಲರು ಒಂದಾಗಿ ಬನ್ನಿ,ನಾವು ಹೋರಾಡುವ.ರೈತರ ಹೋರಾಟಕ್ಕೆ ನನ್ನ ಬೆಂಬಲ ಸದಾ ಇದೆ.ಇದು ಬಗೆ ಹರಿಸಲಾಗದ ಸಮಸ್ಯೆಯೇನು ಅಲ್ಲ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ