ಶತ್ರುನಾಶಕ್ಕೆ ಬರಲಿದೆ ಮಾನವ ರಹಿತ ಸೋಲಾರ್‌ ವಿಮಾನ


Team Udayavani, Feb 17, 2017, 3:45 AM IST

solar.jpg

ಬೆಂಗಳೂರು: ಪರಿಸರ ಸ್ನೇಹಿ ವಿಮಾನಗಳ ತಯಾರಿಕೆಗೆ ಮುಂದಾಗಿರುವ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯ ವಿಜ್ಞಾನಿಗಳು, ಈ ನಿಟ್ಟಿನಲ್ಲಿ ಮಾನವರಹಿತ ಸೌರವಿದ್ಯುತ್‌ ಚಾಲಿತ ವಿಮಾನ
ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದಾರೆ. ಡ್ರೋಣ್‌ ಸೇರಿ ಶತ್ರುಗಳ ಮೇಲೆ ಕಣ್ಗಾವ ಲಿಡಲು ಇತ್ತೀಚಿನ ದಿನಗಳಲ್ಲಿ ಮಾನವರಹಿತ ವಿಮಾನಗಳ ಹಾರಾಟ ಹೆಚ್ಚು ಪ್ರಚಲಿತದಲ್ಲಿದೆ. ಈ ದಿಸೆಯಲ್ಲಿ ಡಿಆರ್‌ಡಿಒ ವಿಜ್ಞಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮಾನವರಹಿತ ಹಾಗೂ ಸೌರವಿದ್ಯುತ್‌ ಚಾಲಿತ ವಿಮಾನಗಳನ್ನು ಆಗಸಕ್ಕೆ ಬಿಡಲು ನಿರ್ಧರಿಸಿದ್ದಾರೆ.

ಡಿಆರ್‌ಡಿಒ ಬಳಿ ಈಗಿರುವ ಮಾನವರಹಿತ ವಿಮಾನಗಳು 24ರಿಂದ 36 ಗಂಟೆಗಳ ಕಾಲ ನಿರಂತರ ಹಾರಾಟ ನಡೆಸುತ್ತಿವೆ. ಅವುಗಳಲ್ಲಿರುವ ಇಂಧನದ ಟ್ಯಾಂಕ್‌ ಸಾಮರ್ಥ್ಯವೇ ಅಷ್ಟು. ಹೀಗಾಗಿ, ವಿಮಾನಗಳ ರೆಕ್ಕೆಗಳ ಮೇಲೆಯೇ
ಸೋಲಾರ್‌ ಪ್ಯಾನೆಲ್‌ ಅಳವಡಿಸಿ, ಅವುಗಳ ಸಹಾಯದಿಂದ ಸೂರ್ಯನ ಕಿರಣಗಳನ್ನು ಇಂಧನವಾಗಿ ಪರಿವರ್ತಿಸಲಾಗುವುದು. ಇದಕ್ಕಾಗಿ ವಿಮಾನಗಳಲ್ಲಿ ಸುಮಾರು 2 ಕಿ.ವ್ಯಾ.ಸಾಮರ್ಥ್ಯದ ಬ್ಯಾಟರಿಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ತಿಂಗಳುಗಟ್ಟಲೆ ನಿರಂತರವಾಗಿ ಈ ವಿಮಾನ ಕಣ್ಗಾವಲು ಇಡಲಿದೆ ಎಂದು ಡಿಆರ್‌ಡಿಒ ವಿಜ್ಞಾನಿ ಎಂ.ಹರಿಪ್ರಸಾದ್‌ “ಉದಯವಾಣಿ’ಗೆ ತಿಳಿಸಿದರು.

ಪರಿಸರ ರಕ್ಷಣೆ: ವಿಮಾನಗಳ ಹಾರಾಟ ದಿಂದ ಸಾಕಷ್ಟು ಪ್ರಮಾಣದ ಇಂಧನ ವ್ಯಯವಾಗುತ್ತಿದೆ. ಮತ್ತೂಂದು ರೀತಿಯಲ್ಲಿ ವಾಯು ಮಾಲಿನ್ಯವೂ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿ ಸರ ರಕ್ಷಣೆ ಜತೆಗೇ ದೇಶದ ಗಡಿ ರಕ್ಷಣೆ ಮಾಡುವ ಪರಿಸರ ಸ್ನೇಹಿ ವಿಮಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. 25 ರಿಂದ 30 ಕೆಜಿಯಷ್ಟು ಭಾರದ ಉಪಕರಣಗಳನ್ನು ಹೊತ್ತು ಮೇಲೆ ಹೋಗುವ ಈ ಚಾಲಕ ರಹಿತ ವಿಮಾನಗಳು, ಆಗಸದಲ್ಲಿ ಸಾಕಷ್ಟು ಎತ್ತರಕ್ಕೆ ಹಾರಬಲ್ಲವು. ಅಷ್ಟೇ ಅಲ್ಲ, ಎಲ್ಲ ಪ್ರಕಾರದ ವಾತಾವರಣದಲ್ಲೂ ಈ ವಿಮಾನಗಳು ಕಾರ್ಯಾಚರಣೆ ನಡೆಸಬಲ್ಲವು. ಹಗಲು ಸೂರ್ಯನ ಕಿರಣಗಳನ್ನು ಇಂಧನವಾಗಿ ಪರಿವರ್ತಿಸಿ, ಬ್ಯಾಟರಿ ಚಾರ್ಜ್‌ ಮಾಡಿಕೊಳ್ಳುತ್ತವೆ. ರಾತ್ರಿ ಅವುಗಳ ಸಹಾಯದಿಂದ ಹಾರಾಟ ನಡೆಸುತ್ತವೆ ಎಂದು ತಿಳಿಸಿದರು. ಈ ಪ್ರಾಜೆಕ್ಟ್ಗಾಗಿ ಕೇಂದ್ರ ಸರ್ಕಾರದಿಂದ ಯಾವುದೇ ಹಣ
ಮಂಜೂರಾಗಿಲ್ಲ. ಈ ಸಂಶೋಧನೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಸರ್ಕಾರಕ್ಕೆ ಈಗಷ್ಟೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

5 ವರ್ಷ ಆಗಸದಲ್ಲಿ ಹಾರಾಟ: ಗೂಗಲ್‌ ಮತ್ತು ಫೇಸ್‌ಬುಕ್‌ ಕಂಪನಿಗಳು ಐದು ವರ್ಷ ಗಟ್ಟಲೆ ಆಗಸದಲ್ಲಿ ನಿರಂತರವಾಗಿ ಹಾರಾಟ ನಡೆಸುವಂತಹ ಮಾನವರಹಿತ ವಿಮಾನಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿವೆ. ಈ
ಮಟ್ಟಿಗೆ ಡಿಆರ್‌ಡಿಒದಿಂದ ಸಾಧ್ಯವಾಗದಿದ್ದರೂ, ತಿಂಗಳುಗಟ್ಟಲೆ ಆಗಸದಲ್ಲಿ ಕಣ್ಗಾವಲಿಡುವ ಸೌರವಿದ್ಯುತ್‌ ಚಾಲಿತ ವಿಮಾನ ತಯಾರಿಸಲು ಉದ್ದೇಶಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.

ಚಿತ್ರದುರ್ಗದಲ್ಲಿ ಪರೀಕ್ಷೆ: ಈಗಾಗಲೇ ಮುಂದುವರಿದ ದೇಶಗಳಲ್ಲಿ ಮಾನವರಹಿತ ವಿಮಾನಗಳ ಹಾರಾಟ ಇದೆ. ಆದರೆ, ನಮ್ಮ ಉದ್ದೇಶ ದೇಶೀಯ ಮಾನವರಹಿತ ವಿಮಾನ ಗಳನ್ನು ಅಭಿವೃದ್ಧಿಪಡಿಸಿ, ಸಣ್ಣ-ಪುಟ್ಟ ದೇಶಗಳಿಗೆ
ಪರಿಚಯಿಸುವುದಾಗಿದೆ. ಸಣ್ಣ ದೇಶಗಳ ಬೇಡಿಕೆಗಳಿಗೆ ತಕ್ಕಂತೆ ಸಾವಿರಾರು ಅಡಿ ಎತ್ತರದವರೆಗೆ ಹಾರಾಟ ನಡೆಸುವ, ಮತ್ತಷ್ಟು ಮುಂದುವರಿದ ತಂತ್ರಜ್ಞಾನಗಳನ್ನು ಒಳಗೊಂಡ ವಿಮಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಈಗಾಗಲೇ ಇಂತಹ ವಿಮಾನಗಳನ್ನು ಚಿತ್ರ ದುರ್ಗದ ಡಿಆರ್‌ಡಿಒ ಪ್ರದೇಶದಲ್ಲಿ ಪರೀಕ್ಷಿಸಿ ಯಶಸ್ವಿ ಕೂಡ ಆಗಿದ್ದೇವೆ ಎಂದು ಡಿಆರ್‌ಡಿಒ ವಿಜ್ಞಾನಿ ಎಂ.ಹರಿಪ್ರಸಾದ್‌ ಹೇಳಿದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

mudhola

ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.