ಅಕ್ರಮ ತಡೆಗೆ ಆಯೋಗ ಚುರುಕು: ಹೆಚ್ಚಿದ ಕಾರ್ಯಾಚರಣೆ, ಚೆಕ್‌ಪೋಸ್ಟ್‌ ತಪಾಸಣೆ


Team Udayavani, Mar 20, 2023, 7:10 AM IST

ಅಕ್ರಮ ತಡೆಗೆ ಆಯೋಗ ಚುರುಕು: ಹೆಚ್ಚಿದ ಕಾರ್ಯಾಚರಣೆ, ಚೆಕ್‌ಪೋಸ್ಟ್‌ ತಪಾಸಣೆ

ಬೆಂಗಳೂರು: ಚುನಾವಣ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು “ಮುಹೂರ್ತ’ಕ್ಕಾಗಿ ಕಾಯಬೇಡಿ ಎಂದು ಕೇಂದ್ರ ಚುನಾವಣ ಆಯೋಗ ಹೇಳಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಯುಗಾದಿ ಹಿನ್ನೆಲೆಯಲ್ಲಿ ಆಮಿಷ, ಉಚಿತ ಉಡುಗೊರೆಗಳ ಭರಾಟೆ ಹೆಚ್ಚಾಗಲಿದ್ದು, ಅಧಿಕಾರಿಗಳು ಮೈಯೆಲ್ಲ ಕಣ್ಣಾಗಿಸಿದ್ದಾರೆ. 2 ದಿನಗಳಲ್ಲಿ 9.19 ಕೋಟಿಯಷ್ಟು ಅಕ್ರಮ ಹಣವನ್ನು ಜಪ್ತಿ ಮಾಡಲಾಗಿದೆ.

ಹೆಚ್ಚುತ್ತಿದೆ ಅಕ್ರಮ
ಚುನಾವಣ ನೀತಿ ಸಂಹಿತೆ ಜಾರಿ ಯಾಗದ್ದನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕಾರಣಿಗಳು ಮತದಾರರ ಓಲೈಕೆಗೆ ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ವಿವಿಧ ರೀತಿಯ ಉಡುಗೊರೆಗಳನ್ನು ಹಂಚುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.

ಚುನಾವಣೆ ಮೇಲೆ ಪ್ರಭಾವ ಬೀರ ಬಹುದಾದ ಆಮಿಷ, ಉಡುಗೊರೆ, ಹಣ ಹಂಚಿಕೆಗೆ ಕಡಿವಾಣ ಹಾಕಲು ರಾಜ್ಯ ಪೊಲೀಸರು, ಕಂದಾಯ ಗುಪ್ತಚರ ನಿರ್ದೇಶನಾಲಯ, ರಾಜ್ಯ ಜಿಎಸ್‌ಟಿ ವಿಭಾಗ, ಕೇಂದ್ರ ಜಿಎಸ್‌ಟಿ ವಿಭಾಗ, ಕರಾವಳಿ ಕಾವಲು ಪಡೆ, ಇ.ಡಿ., ಏರ್‌ಪೋರ್ಟ್‌, ಪರೋಕ್ಷ ತೆರಿಗೆ ಮತ್ತು ಸುಂಕ ಕೇಂದ್ರ ಮಂಡಳಿ (ಸಿಬಿಐಸಿ) ಸಹಿತ ಚುನಾವಣ ನೀತಿ ಸಂಹಿತೆ ಜಾರಿ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಬೆಂಗಳೂರು ಸಹಿತ ಪ್ರಮುಖ ನಗರಗಳಲ್ಲಿ ರಾತ್ರಿ ಗಸ್ತು ಮತ್ತು ತಪಾಸಣೆ ಬಿಗಿಗೊಳಿಸಲಾಗಿದೆ.

ಬ್ಯಾಂಕ್‌, ಎಟಿಎಂ ಮೇಲೂ ಕಣ್ಣು
ಸಂಜೆ 5ರಿಂದ ಬೆಳಗ್ಗೆ 10ರ ವರೆಗೆ ಎಟಿಎಂಗಳಿಗೆ ನಗದು ತುಂಬುವುದನ್ನು ನಿರ್ಬಂಧಿಸಲಾಗುತ್ತಿದೆ. ದೊಡ್ಡ ಮೊತ್ತದ ಹಾಗೂ ಸಂದೇಹಾಸ್ಪದ ವಹಿವಾಟುಗಳ ಬಗ್ಗೆ ನಿಗಾ ಇಡಲು ಬ್ಯಾಂಕುಗಳಿಗೆ ತಾಕೀತು ಮಾಡಲಾಗಿದೆ. ರಾಜ್ಯಕ್ಕೆ ಮತ್ತೊಂದು ರಾಜ್ಯದಿಂದ ಸಾಮಾನ್ಯವಾಗಿ ಬರುವ ಎಲೆ ಕ್ಟ್ರಾನಿಕ್‌ ಉಪಕರಣಗಳು ಸಹಿತ ಸಾಮಾನ್ಯ ಬಳಕೆಯ ವಸ್ತುಗಳ ಪ್ರಮಾಣ ಹೆಚ್ಚಾದರೆ ಅವುಗಳನ್ನು ಪರಿಶೀಲಿಸಲಾಗುತ್ತಿದೆ. ಆಧುನಿಕ ಎಲೆಕ್ಟ್ರಾನಿಕ್‌ ವಿಧಾನದ ಹಣಕಾಸಿನ ವಹಿವಾಟುಗಳ ಮೇಲೂ ಕಣ್ಣಿಡಲಾಗುತ್ತಿದೆ.

ಧಾರ್ಮಿಕ ಕೇಂದ್ರಗಳ ಮೇಲೂ ನಿಗಾ
ಧಾರ್ಮಿಕ ಕೇಂದ್ರಗಳಿಗೆ ನೇತಾರರ “ಪ್ರದಕ್ಷಿಣೆ’ ಜೋರಾ ಗುತ್ತಿದ್ದು, ಆಯೋಗವು ಧಾರ್ಮಿಕ ಸ್ಥಳಗಳ ಮೇಲೆ ನಿಗಾ ವಹಿಸಿದೆ. ರಾಜಕೀಯ ಪಕ್ಷಗಳು, ರಾಜಕಾರಣಿಗಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಕಾನೂನು ಮತ್ತು ನೀತಿ ಸಂಹಿತೆಯ ನಿಯಮಗಳಿಗೆ ವಿರುದ್ಧವಾಗಿ ಏನಾದರೂ ನಡೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಕೇಂದ್ರ ಚುನಾವಣ ಆಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಸೂಚನೆ ನೀಡಿದೆ.

 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.