ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ದ:ವಿಧಾನಸಭೆಯಲ್ಲಿ ಡಾ.ಸುಧಾಕರ್
ಪಕ್ಷಾತೀತವಾಗಿ ವಿಚಾರ ಪ್ರಸ್ತಾಪ ; ಜಮೀನು ಲಭ್ಯತೆ ಆಧಾರದ ಮೇಲೆ ಸ್ಥಳ ನಿರ್ಧಾರ
Team Udayavani, Sep 22, 2022, 3:24 PM IST
ವಿಧಾನಸಭೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದು, ಎಲ್ಲಿ ಆಗಬೇಕು ಎಂಬುದನ್ನು ಜಮೀನು ಲಭ್ಯತೆ ಆಧಾರದ ಮೇಲೆ ಸ್ಥಳ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ಭರವಸೆ ನೀಡಿದ್ದಾರೆ.
ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ವಿ.ದೇಶಪಾಂಡೆ, ಶಿವರಾಂ ಹೆಬ್ಬಾರ್, ದಿನಕರ ಶೆಟ್ಟಿ, ರೂಪಾಲಿ ನಾಯ್ಕ್ , ಸುನೀಲ್ ನಾಯ್ಕ್ ಸೇರಿದಂತೆ ಎಲ್ಲ ಸದಸ್ಯರು ಪಕ್ಷಾತೀತವಾಗಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಸಚಿವರು ಈ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಆತ್ಮಾವಲೋಕನ ಮಾಡಿಕೊಳ್ಳಿ: ಉಭಯ ಸದನದಲ್ಲಿ ಅನುರಣಿಸಿದ ‘ಪೇಸಿಎಂ’ ವಿವಾದ
ಇದೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ಶಾಸಕರೆಲ್ಲರೂ ಈ ಚರ್ಚೆಯಲ್ಲಿ ಭಾಗವಹಿಸಿದ್ದು, ಜಿಲ್ಲೆಯ ಪರ ಗಟ್ಡಿ ಧ್ವನಿ ಮೊಳಗಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟ ದರ್ಜೆಯ ಆರೋಗ್ಯ ಸೇವೆ ಸಿಗಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ನಮವೆ ಭರವಸೆ ನೀಡಿದ್ದಾರೆ. ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ. ವಿಧಾನಸಭೆ ಕಲಾಪ ಮುಗಿದ ತಕ್ಷಣ ಮತ್ತೊಮ್ಮೆ ಸಭೆ ನಡೆಸಿ ಆದಷ್ಟು ಬೇಗ ಆಸ್ಪತ್ರೆ ವಿಚಾರ ಇತ್ಯರ್ಥಗೊಳಿಸುತ್ತೇವೆ ಎಂದರು.
ಆಕ್ಷೇಪ
ಈ ವಿಚಾರದಲ್ಲಿ ಇಷ್ಟೊಂದು ದೀರ್ಘ ಚರ್ಚೆಗೆ ಅವಕಾಶ ನೀಡಿರುವ ಬಗ್ಗೆ ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ಒಂದೇ ಪ್ರಶ್ನೆಗೆ ಬಗ್ಗೆ ಎಷ್ಟು ವರ್ಷ ಅವಕಾಶ ನೀಡುತ್ತೀರಿ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನಾನು ಚರ್ಚೆಗೆ ಅವಕಾಶ ಕೊಡದೇ ಇದ್ದರೆ ಅದನ್ನೇ ವಿವಾದ ಮಾಡುವುದಕ್ಕೆ ನನ್ನ ಸ್ನೇಹಿತರು ಕಾಯ್ದುಕೊಂಡು ಕುಳಿತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಇದು ನಮ್ಮ ಕ್ಷೇತ್ರದ ಜನತೆಯ ಆದ್ಯತೆಯೂ ಆಗಿದೆ ಎಂದರು.
ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ದಿನಕರ ಶೆಟ್ಟಿ ಹಾಗೂ ಸುನೀಲ್ ನಾಯ್ಕ್ ಜಿಲ್ಲೆಗೆ ತಕ್ಷಣ ಆಸ್ಪತ್ರೆಗೆ ತಕ್ಷಣ 300 ಕೋಟಿ ರೂ. ಅನುದಾನ ಘೋಷಣೆ ಮಾಡಲೇಬೇಕು ಎಂದು ಬಾವಿಗೆ ನುಗ್ಗಿ ಧರಣಿ ಪ್ರಾರಂಭಿಸಲು ಮುಂದಾದರು.ಕೊನೆಗೆ ಸ್ಪೀಕರ್ ಸೂಚನೆ ಮೇರೆಗೆ ಪ್ರತಿಭಟನೆ ವಾಪಾಸ್ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!