![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕ್ಷುಲ್ಲಕ ಕಾರಣಕ್ಕೆ ಕ್ಯಾತಮಾರನಹಳ್ಳಿಯಲ್ಲಿ ಕೋಮು ಘರ್ಷಣೆ
Team Udayavani, Apr 21, 2018, 11:28 AM IST
![khulakka.jpg](https://www.udayavani.com/wp-content/uploads/2018/04/21/khulakka.jpg)
ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮೈಸೂರಿನ ಸೂಕ್ಷ್ಮ ಪ್ರದೇಶವಾದ ಕ್ಯಾತಮಾರನಹಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಕಾಶ್ಮೀರದ ಕಥುವಾದಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಆಸಿಫಾ ಕೊಲೆ ಪ್ರಕರಣ ಖಂಡಿಸಿ ಸಮುದಾಯವೊಂದರ ಯುವಕರು ರ್ಯಾಲಿ ನಡೆಸುವ ವೇಳೆ ಅಂಗಡಿ ಮುಂಗಟ್ಟು ಬಂದ್ ಮಾಡಿಸಲು ಮುಂದಾದರು.
ಈ ವೇಳೆ ಮತ್ತೂಂದು ಸಮುದಾಯದ ಯುವಕರು ಆಕ್ಷೇಪಡಿಸಿದ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಕೆಲ ಹಿರಿಯರು ಎರಡೂ ಸಮುದಾಯಗಳ ಯುವಕರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ.
ಇದಾದ ಬಳಿಕ ರ್ಯಾಲಿಯಲ್ಲಿದ್ದ ಕೆಲ ಯುವಕರು ಸಮೀಪದ ಅಂಗಡಿಗೆ ನುಗ್ಗಿ ಅಂಗಡಿಯಲ್ಲಿದ್ದ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಅಂಗಡಿ ಮಾಲೀಕರು ಹಾಗೂ ಸ್ಥಳೀಯ ಯುವಕರು ರ್ಯಾಲಿ ನಡೆಸಿದ ಯುವಕರ ವಿರುದ್ಧ ತಿರುಗಿಬಿದ್ದಿದ್ದಾರೆ.
ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಎರಡೂ ಸಮುದಾಯಗಳ ಯುವಕರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಅಷ್ಟರಲ್ಲಾಗಲೇ ಗಲಾಟೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಎರಡೂ ಸಮುದಾಯಗಳ ಯುವಕರನ್ನು ಚದುರಿಸಿದ್ದಾರೆ.
ಕಲ್ಲು ತೂರಾಟ; ಲಾಠಿ ಪ್ರಹಾರ: ಈ ನಡುವೆ ಸಂಜೆ ವೇಳೆಗೆ ಸಂಸದ ಪ್ರತಾಪ್ಸಿಂಹ ಕ್ಯಾತಮಾರನಹಳ್ಳಿ ಬಡಾವಣೆಗೆ ಭೇಟಿ ನೀಡಿದ ವೇಳೆ ಯುವಕರ ಗುಂಪೊಂದು ಕಲ್ಲುತೂರಾಟ ನಡೆಸಲು ಮುಂದಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಮನಗಂಡ ಪೊಲೀಸರು ಕೂಡಲೇ ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.
ಇದಾದ ಬಳಿಕ ಮತ್ತೂಂದು ಯುವಕರ ಗುಂಪು ಜನೌಷಧಿ ಕೇಂದ್ರದ ಮೇಲೆ ದಾಳಿ ಮಾಡಿದ್ದಲ್ಲದೇ, ಮಳಿಗೆಯಲ್ಲಿದ್ದ ಔಷಧಿ ದಾಸ್ತಾನನ್ನು ಹೊರಗೆ ಎಸೆದಿದೆ. ಈ ವೇಳೆ ಪೊಲೀಸರು ಮತ್ತೂಂದು ಸುತ್ತಿನ ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು. ಪ್ರತಿ ನಿಮಿಷಕ್ಕೂ ಇಲ್ಲಿನ ವಾತಾವರಣ ಬದಲಾಗುತ್ತಿರುವುದನ್ನು ಕಂಡ ಪೊಲೀಸರು ಕೂಡಲೇ ಹೆಚ್ಚಿನ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ.
ಬೂದಿ ಮುಚ್ಚಿದ ಕೆಂಡ: ಸದ್ಯಕ್ಯಾತಮಾರನಹಳ್ಳಿಯಲ್ಲಿ ಪರಿಸ್ಥತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಹೆಚ್ಚನ ನಿಗಾ ವಹಿಸಿದ್ದಾರೆ. ಸ್ಥಳೀಯ ಪೊಲೀಸರೊಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅರೆಸೇನಾ ಪಡೆ, ಕ್ಷಿಪ್ರ ಕಾರ್ಯಪಡೆ ಪೊಲೀಸರನ್ನೂ ಕೂಡ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ನಿಷೇದಾಜ್ಞೆ ಜಾರಿ: ಪರಿಸ್ಥಿತಿ ಬಿಗುವಿನಿಂದ ಕೂಡಿರುವ ಹಿನ್ನೆಲೆಯಲ್ಲಿ ಎನ್.ಆರ್. ಕ್ಷೇತ್ರದಾದ್ಯಂತ ಮುಂದಿನ 48 ಗಂಟೆಗಳ ಕಾಲ ನಿಷೇದಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರರಾವ್ ಅವರು ಆದೇಶ ಹೊರಡಿಸಿದ್ದಾರೆ.
ಪೊಲೀಸರ ಮೇಲೆ ಕಲ್ಲುತೂರಾಟ: ಸಮುದಾಯವೊಂದರ ಉದ್ರಿಕ್ತ ಯುವಕರ ಗುಂಪು ಒಂದು ಹಂತದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ವಿಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅನಿಲ್ಕುಮಾರ್ ಅವರಿಗೆ ತೀವ್ರ ಪೆಟ್ಟಾಗಿದೆ. 5ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ಶಾಂತಿಯುತವಾದ ಎನ್.ಆರ್. ಕ್ಷೇತ್ರದಲ್ಲಿ ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಎರಡು ಸಮುದಾಯಗಳ ನಡುವೆ ಸಂಘರ್ಷ ಮೂಡಿಸುವ ಕೆಲಸ ಮಾಡಿದ್ದಾರೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು. ಪೊಲೀಸರು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.
-ತನ್ವೀರ್ ಸೇಠ್, ಸಚಿವ
ಶಾಂತಿಯುತವಾಗಿದ್ದ ಮೈಸೂರಿನಲ್ಲಿ ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ಚುನಾವಣೆಯ ಲಾಭ ಪಡೆಯುವ ತಂತ್ರ ಇದಾಗಿದೆ. ಗಲಾಟೆ ಹಿಂದೆ ಸಂಘಟನೆಯೊಂದರ ಕೈವಾಡವಿದೆ. ರಾಜ್ಯ ಸರ್ಕಾರ ಕೆಲ ಪ್ರಕರಣಗಳಲ್ಲಿ ಸಂಘಟನೆಯೊಂದರ ಸದಸ್ಯರ ಮೇಲಿನ ಪ್ರಕರಣ ಹಿಂಪಡೆದಿರುವುದು ಈ ರೀತಿಯ ಕೃತ್ಯಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿದೆ.
-ಪ್ರತಾಪ್ ಸಿಂಹ, ಸಂಸದ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.