ಹಳೇ ನಿಗಮಗಳಿಗೆ ಸಿಕ್ಕಿಲ್ಲ ವಾರಸುದಾರ; ಹೊಸದಕ್ಕೆ ಯಾರು ಜವಾಬ್ದಾರ?

15 ನಿಗಮಗಳಿಗೆ ಅಧ್ಯಕ್ಷರೇ ಇಲ್ಲ ಸುಸಜ್ಜಿತ ಕಚೇರಿಯಿಲ್ಲ 

Team Udayavani, Nov 20, 2020, 5:45 AM IST

ಲೆಕ್ಕಭರ್ತಿಗೆ ಸಮುದಾಯ ನಿಗಮಗಳು

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲೀಗ ನಿಗಮ ರಚನೆಯ ಹಬ್ಬ ಬಿರುಸಾಗಿದೆ. ಮೊದಲಿಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಬಳಿಕ ಮರಾಠ ಸಮುದಾಯ ನಿಗಮ, ಅನಂತರದಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ… ಇದಷ್ಟೇ ಅಲ್ಲ, ಇನ್ನೂ ಕೆಲವು ಸಮುದಾಯಗಳು ತಮಗೂ ಒಂದು ನಿಗಮ ಸ್ಥಾಪಿಸಿ ಎಂದು ದುಂಬಾಲು ಬೀಳುತ್ತಿವೆ. ಇದರ ಮಧ್ಯೆಯೇ ಈ ಹಿಂದೆ ರಚನೆಯಾಗಿರುವ ಹಲವಾರು ನಿಗಮಗಳಿಗೆ ಅಧ್ಯಕ್ಷರನ್ನೇ ನೇಮಕ ಮಾಡಿಲ್ಲ ಎಂಬ ವಿಚಾರ ಬಹಿರಂಗವಾಗಿದೆ.

ರಾಜ್ಯದಲ್ಲಿ ಸಮುದಾಯಗಳ ಅಭಿವೃದ್ಧಿಗೆ ರಚನೆಯಾಗಿರುವುದು ಇಪ್ಪತ್ತು ನಿಗಮಗಳು. ಆದರೆ ಅಧ್ಯಕ್ಷರು ನೇಮಕಗೊಂಡಿರುವುದು ಐದಕ್ಕೆ ಮಾತ್ರ. ಇನ್ನೈದು ನಿಗಮಗಳಿಗೆ ಇನ್ನೂ ಸುಸಜ್ಜಿತ ಕಚೇರಿ ಭಾಗ್ಯವೂ ಸಿಕ್ಕಿಲ್ಲ. ಉದಾಹರಣೆಗೆ, ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಿ ಘೋಷಣೆಯಾದ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಇನ್ನೂ ಕಚೇರಿಯೇ ಸಿಕ್ಕಿಲ್ಲ. 25 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿ 15 ಕೋ.ರೂ. ಬಿಡುಗಡೆಯಾಗಿದ್ದರೂ ನಿಗಮ ಅಧಿಕೃತವಾಗಿ ಇನ್ನೂ ಕಾರ್ಯಾರಂಭವೇ ಮಾಡಿಲ್ಲ.

ನಿಗಮಗಳಿಗೆ ವಾರ್ಷಿಕವಾಗಿ ನೀಡುವ ಅನುದಾನ ಸಿಬಂದಿ ವೇತನ ಮತ್ತು ಇತರ ಆಡಳಿತಾತ್ಮಕ ವೆಚ್ಚಕ್ಕೆ ಸಾಕಾಗುತ್ತಿಲ್ಲ. 25 ಕೋಟಿ ರೂ. ಅನುದಾನ ಯಾವುದಕ್ಕೂ ಸಾಲದು ಎಂದು 100ರಿಂದ 200 ಕೋಟಿ ರೂ.ಗಳಿಗೆ ನಿಗಮಗಳು ಬೇಡಿಕೆ ಇಟ್ಟಿವೆ.

ಹಿಂ. ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ನಿಗಮಗಳಿಗೂ ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಸ್ಥಳಾವಕಾಶ ಎಂದು ಆದೇಶಿಸಲಾಗಿದೆ. ಕೆಲವು ನಿಗಮಗಳು ಚಿಕ್ಕ ಕೋಣೆಯಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ನಿಗಮಗಳ ಸ್ಥಾಪನೆ ಮಾಡುವಾಗ ಇರುವ ಉತ್ಸಾಹ ಅನಂತರ ಇಲ್ಲದಿರುವುದು ಕಂಡುಬರುತ್ತದೆ.

ಓಲೈಕೆ ತಂತ್ರ
ರಾಜ್ಯದಲ್ಲಿ ಸಮುದಾಯಗಳ ಅಭಿವೃದ್ಧಿಗೆ ನಿಗಮ ಸ್ಥಾಪನೆ ಹೊಸದಲ್ಲ. ಆದರೆ ಹತ್ತು ವರ್ಷಗಳಿಂದೀಚೆಗೆ ಓಲೈಕೆ ರಾಜಕಾರಣದ ಭಾಗವಾಗಿ ನಿಗಮಗಳ ಸಂಖ್ಯೆ ಇಪ್ಪತ್ತಕ್ಕೆ ಏರಿಕೆಯಾಗಿದೆ.

2008ರ ವರೆಗೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ದೇವರಾಜ ಅರಸು ನಿಗಮ, ಅಲ್ಪಸಂಖ್ಯಾಕರಿಗೆ ಅಲ್ಪಸಂಖ್ಯಾಕರ ನಿಗಮ, ಪ. ಜಾತಿ ಸಮುದಾಯಕ್ಕೆ ಡಾ| ಬಿ.ಆರ್‌. ಅಂಬೇಡ್ಕರ್‌ ನಿಗಮ, ಪ. ಪಂಗಡಕ್ಕೆ ಮಹರ್ಷಿ ವಾಲ್ಮೀಕಿ ನಿಗಮ, ಮಹಿಳೆಯರಿಗೆ ಮಹಿಳಾ ಅಭಿವೃದ್ಧಿ ನಿಗಮ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾಕರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಎಲ್ಲ ವರ್ಗದವರ ಅಭಿವೃದ್ಧಿಗೂ ಯೋಜನೆ ರೂಪಿಸಿ ಕಾರ್ಯ ನಿರ್ವಹಿಸುತ್ತಿದ್ದವು.

ಅಧ್ಯಕ್ಷರಿಲ್ಲದ ನಿಗಮಗಳು
=ದೇವರಾಜ ಅರಸು ಹಿಂ. ವ. ಅಭಿವೃದ್ಧಿ ನಿಗಮ
=ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮ
=ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
=ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
=ಅಲೆಮಾರಿ /ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಮಂಡಳಿ
=ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ
=ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
=ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ
=ಕ್ರೈಸ್ತ ಅಭಿವೃದ್ಧಿ ನಿಗಮ
=ಭೋವಿ ಅಭಿವೃದ್ಧಿ ನಿಗಮ
=ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ
=ಸವಿತಾ ಸಮಾಜ ಅಭಿವೃದ್ಧಿ ನಿಗಮ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.