ಪರಿಹಾರ ನೀಡೋದು ಕೇಂದ್ರದ ಭಿಕ್ಷೆಯಲ್ಲ

ಪರಿಹಾರ, ಕೇಂದ್ರ, ಭಿಕ್ಷ

Team Udayavani, Sep 29, 2019, 3:06 AM IST

parihara

ವಿಜಯಪುರ: ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಸಂತ್ರಸ್ತರ ಬದುಕು ಬೀದಿಪಾಲಾಗಿದೆ. ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರು ಕಣ್ಣೀರು ಹಾಕುತ್ತಿರುವ ಸಂದರ್ಭ ಯಾರೂ ಹಗುರವಾಗಿ ಮಾತನಾಡಬಾರದು. ಇಷ್ಟಕ್ಕೂ ಸಂತ್ರಸ್ತರಿಗೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಭಿಕ್ಷೆಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟದಲ್ಲಿರುವಾಗ ಎಲ್ಲೋ ಕುಳಿತ ಕೆಲವರು ಕೇಂದ್ರದಿಂದ ಅನುದಾನದ ಅವಶ್ಯಕತೆ ಇಲ್ಲವೆಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಉತ್ತರ ಕರ್ನಾಟಕದ ಸಂತ್ರಸ್ತರು ಕೇಂದ್ರದಿಂದ ಪರಿಹಾರ ಧನ ಕೇಳುತ್ತಿದ್ದಾರೆಯೇ ಹೊರತು ಭಿಕ್ಷೆಯನ್ನಲ್ಲ. ರಾಜ್ಯದ ಜನರು ಮೋದಿ ಅವರ ಕೈ ಬಲಪಡಿಸಲೆಂದೇ ಬಿಜೆಪಿಯ 25 ಸಂಸದರನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ಕೂಡಲೇ ಬೇಜವಾಬ್ದಾರಿ ಹೇಳಿಕೆ ಹಿಂಪಡೆಯಬೇಕು ಎಂದರು.

ಒಗ್ಗೂಡಿ ಒತ್ತಡ ತರಲಿ: ಉತ್ತರ ಕರ್ನಾಟಕದ ಜನರ ಮನೆಗಳು, ಬೆಳೆದು ನಿಂತಿದ್ದ ಬೆಳೆಗಳು, ಫ‌ಲವತ್ತಾದ ಮಣ್ಣು ಎಲ್ಲವೂ ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಕೇಂದ್ರ-ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳೇ ಅಧಿಕಾರದಲ್ಲಿದ್ದು, ಆಡಳಿತ ಪಕ್ಷದ ಶಾಸಕನೇ ಆಗಿದ್ದರೂ ಸಂಕಷ್ಟದಲ್ಲಿರುವ ಜನರ ಪರ ಧ್ವನಿ ಎತ್ತುವುದು ನನ್ನ ಕರ್ತವ್ಯ. ಪರಿಹಾರಕ್ಕಾಗಿ ನಮ್ಮ ಎಲ್ಲ ಸಂಸದರೂ ಒಗ್ಗೂಡಿ ಪ್ರಧಾನಿಗೆ ಒತ್ತಡ ತರಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಫೋನ್‌ ಕದ್ದಾಲಿಕೆ, ಅದರಲ್ಲೂ ಆದಿಚುಂಚನಗಿರಿ ಶ್ರೀಗಳಂಥ ಸಂತರ ಫೋನ್‌ ಕೂಡ ಕದ್ದಾಲಿಕೆ ಮಾಡಿದ್ದಾರೆಂಬುದು ನಿಜಕ್ಕೂ ನೋವಿನ ಸಂಗತಿ ಹಾಗೂ ಸಮಾಜಕ್ಕೆ ಮಾಡಿದ ಅಪಮಾನ. ಶ್ರೀಗಳು ಸೇರಿ ಗಣ್ಯರ ಫೋನ್‌ ಕದ್ದಾಲಿಕೆ ಮಾಡಿರುವುದು ಕೀಳುಮಟ್ಟದ ರಾಜಕೀಯ ಹಾಗೂ ರಾಜಕೀಯ ವ್ಯಭಿಚಾರ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು.
-ಬಸನಗೌಡ ಪಾಟೀಲ ಯತ್ನಾಳ, ಶಾಸಕ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.