ವರುಣಾಕ್ಕೆ ಬಂದು ಸ್ಪರ್ಧಿಸಿ; ಡಿವಿಎಸ್ಗೆ ಸಿದ್ದರಾಮಯ್ಯ ಸವಾಲು!
Team Udayavani, Dec 10, 2017, 12:23 PM IST
ಬೆಂಗಳೂರು:‘ವರುಣಾ ಕ್ಷೇತ್ರಕ್ಕೆ ಸದಾನಂದ ಗೌಡರೇ ಬಂದು ಸ್ಪರ್ಧಿಸಲಿ , ಬೆರೆಯವರನ್ನು ನಿಲ್ಲಿಸಿ ಬಲಿ ಕೊಡುವುದು ಬೇಡ’ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಸವಾಲೆಸೆದಿದ್ದಾರೆ.
‘ನಾನು ಕ್ಷೇತ್ರಕ್ಕೆ ತೆರಳಿದ ಬಳಿಕ ಸಿದ್ದರಾಮಯ್ಯ ಅವರಿಗೆ ನಡುಕ ಶುಕರುವಾಗಿದೆ’ ಎಂದಿದ್ದ ಸದಾನಂದ ಗೌಡರ ಹೇಳಿಕೆಗೆ ಸಿದ್ದರಾಮಯ್ಯ ಭಾನುವಾರ ಈ ಪ್ರತಿಕ್ರಿಯೆ ನೀಡಿದ್ದಾರೆ.
‘ಸದಾನಂದ ಗೌಡರಿಗೆ ವರುಣಾ ಕ್ಷೇತ್ರವೇ ಗೊತ್ತಿಲ್ಲ. ಸುಮ್ಮನೆ ಏನೇನೋ ಮಾತನಾಡುತ್ತಿದ್ದಾರೆ. ಅಲ್ಲಿ ಈ ಬಾರಿ ನಾನು ಸ್ಪರ್ಧಿಸುತ್ತಿಲ್ಲ. ನನ್ನ ಮಗ ಸ್ಪರ್ಧಿಸುತ್ತಿದ್ದಾನೆ. ಸದಾನಂದ ಗೌಡರು ಅಲ್ಲಿಂದಲೇ ಸ್ಪರ್ಧಿಸಲಿ. ಕಳೆದ ಬಾರಿ ನಾನು 32 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೆ. ಅಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವೆ?ಅಷ್ಟು ಸುಲಭವೆ?’ ಎಂದು ಪ್ರಶ್ನಿಸಿದರು.
‘ನಾನು ಯಾರಿಗೂ ಭಯಪಡುವುದಿಲ್ಲ. ಸದಾನಂದ ಗೌಡರಿಗೆ ಕ್ಷೇತ್ರದ ಉಸ್ತುವಾರಿ ನೀಡಿದ ಕೂಡಲೆ ಜನ ಬದಲಾಗುತ್ತಾರಾ? ಭಾಷಣ ಬಿಗಿಯುವ ಬದಲು ಸದಾನಂದ ಗೌಡರೇ ಸ್ಪರ್ಧಿಸಲಿ’ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ