ಪೈಪೋಟಿಯಲ್ಲಿ ಭೋಜನಕೂಟ
Team Udayavani, Feb 8, 2019, 1:06 AM IST
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪೈಪೋಟಿಯಲ್ಲಿ ಶಾಸಕರು ಹಾಗೂ ಸಚಿವರಿಗೆ ಭೋಜನ ಕೂಟ ಏರ್ಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಪ್ರತಿ ಬಾರಿ ಸಂಪುಟ ಸಭೆಗೂ ಮುನ್ನ ಕಾಂಗ್ರೆಸ್ ಸಚಿವರಿಗೆ ಭೋಜನ ಕೂಟ ಏರ್ಪಡಿಸಬೇಕೆಂಬ ಹಿನ್ನೆಲೆಯಲ್ಲಿ ಎರಡು ಬಾರಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉಪಾಹಾರ ಕೂಟ ಏರ್ಪಡಿಸಿದ್ದರು. ಅದು ಪರಮೇಶ್ವರ್ ಶಕ್ತಿ ಪ್ರದರ್ಶನ ಎಂಬ ವ್ಯಾಖ್ಯಾನಕ್ಕೆ ಕಾರಣವಾಗಿತ್ತು. ಅದಾದ ಬಳಿಕ, ಇತ್ತೀಚೆಗೆ ಜಂಟಿ ಅಧಿವೇಶನ ಆರಂಭಕ್ಕೂ ಮುನ್ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಸಚಿವರಿಗೆ ಭೋಜನ ಕೂಟ ಏರ್ಪಡಿಸಿ, ಸದನದಲ್ಲಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಅದಾದ ಮಾರನೇ ದಿನವೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎರಡೂ ಪಕ್ಷಗಳ ಶಾಸಕರಿಗೆ ಜಂಟಿ ಭೋಜನ ಕೂಟ ಏರ್ಪಡಿಸಿ, ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ತರುವ ಪ್ರಯತ್ನ ನಡೆಸಿದ್ದರು. ಈಗ ಸಿದ್ದರಾಮಯ್ಯ ಕೂಡ ಅದೇ ಮಾರ್ಗ ಅನುಸರಿಸುತ್ತಿದ್ದು, ಫೆಬ್ರವರಿ 12 ರಂದು ಮೈತ್ರಿ ಸರ್ಕಾರದ ಎರಡೂ ಪಕ್ಷಗಳ ಶಾಸಕರಿಗೆ ಔತಣಕೂಟ ಏರ್ಪಡಿಸಿ, ಎಲ್ಲರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಬ್ಬರು ನಾಯಕರ ಭೋಜನ ಕೂಟದ ರಾಜಕೀಯ ಎರಡೂ ಪಕ್ಷದ ಶಾಸಕರಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ