ಟಿಕೆಟ್‌ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ದರೆ ಇಲ್ಲ; ವಿ. ಸೋಮಣ್ಣ ಹೊಸ ವರಸೆ


Team Udayavani, Mar 14, 2023, 5:40 AM IST

ಟಿಕೆಟ್‌ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ದರೆ ಇಲ್ಲ; ವಿ. ಸೋಮಣ್ಣ ಹೊಸ ವರಸೆ

ಬೆಂಗಳೂರು: ಬಿಜೆಪಿಯಲ್ಲಿ ಟಿಕೆಟ್‌ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲ ಅಂದರೆ ಇಲ್ಲ. ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್‌ ಕೇಳಿದ್ದೇನಾ? ಎಂದು ಹೇಳುವ ಮೂಲಕ ವಸತಿ ಸಚಿವ ಸೋಮಣ್ಣ ಅವರು ಹೊಸ ವರಸೆ ತೆಗೆದಿದ್ದಾರೆ. ಜತೆಗೆ ಪಕ್ಷದಲ್ಲೇ ಇರುತ್ತೇನೆ ಅಥವಾ ಪಕ್ಷ ತ್ಯಜಿಸುವೆ ಎಂಬುದರ ಬಗ್ಗೆ ಸ್ಪಷ್ಟವಾಗಿ ಹೇಳದಿರುವುದರಿಂದ ಗೊಂದಲ ಮುಂದುವರಿದಿದೆ.

ಸಿಎಂ ಬಸವರಾಜ ಬೊಮ್ಮಾಯಿ ಜತೆ ನಡೆದ ಮೂರು ಸುತ್ತಿನ ಸಂಧಾನ ಸಭೆಯ ಬಳಿಕವೂ ಸೋಮಣ್ಣ ಅಸಮಾಧಾನ ಇನ್ನೂ ಉಳಿದುಕೊಂಡಿದ್ದು, ಟಿಕೆಟ್‌ ಕೊಟ್ಟರೆ ಸ್ಪರ್ಧಿಸುತ್ತೇನೆ ಎನ್ನುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಇವೆಲ್ಲ ಇರುತ್ತದೆ. ಎಲ್ಲಿ ಏನು ಹೇಳಬೇಕೋ ಹೇಳಿದ್ದೇನೆ. ಕವಲುದಾರಿಗಳು ಇರುತ್ತವೆ. ನಾನೇನೂ ಸನ್ಯಾಸಿಯಲ್ಲ. ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ನಾವೆಲ್ಲರೂ ಸ್ನೇಹಿತರು. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಕೆಲಸ ಅವರು ಮಾಡುತ್ತಾರೆ, ನನ್ನ ಕೆಲಸ ನಾನು ಮಾಡುತ್ತೇನೆ. ನನಗೆ ಅಸಮಾಧಾನ ಇದೆಯೆಂದು ನಾನೆಲ್ಲೂ ಹೇಳಿಲ್ಲ ಎಂದರು.

ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅವರು ಬೇಸರಗೊಳ್ಳುವುದು ಬೇಡ. ಅವರು ಪಕ್ಷಕ್ಕೆ ಬಂದಾಗಿನಿಂದಲೂ ಹಲವು ಜವಾಬ್ದಾರಿಗಳನ್ನು ಕೊಡಲಾಗಿದೆ. ಬಿಜೆಪಿಯ ಹಿರಿಯರಿಗೆ ಸಿಗದ ಸ್ಥಾನಗಳು ಸೋಮಣ್ಣ ಅವರಿಗೆ ಸಿಕ್ಕಿದೆ. ಅವರು ಶಾಸಕರಾಗಿ ಆಯ್ಕೆಗೊಳ್ಳದೇ ಇದ್ದಾಗ ಪರಿಷತ್‌ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನದಲ್ಲಿ ಮುಂದುವರಿಸಲಾಗಿತ್ತು.
– ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

ಸಚಿವ ಸೋಮಣ್ಣ ಬಿಜೆಪಿ ಬಿಡಲ್ಲ. ನಮ್ಮ ಜತೆಗೆ ಇರುತ್ತಾರೆ. ನಾನು ಅವರು ಹಳೆಯ ಸ್ನೇಹಿತರು. ಅವರು ಎಲ್ಲಿಯೂ ಹೋಗುವುದಿಲ್ಲ. ಈ ಕುರಿತು ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ.
– ಬಸವರಾಜ ಬೊಮ್ಮಾಯಿ, ಸಿಎಂ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.