ಬಿಎಸ್ವೈ ಪುತ್ರ ರಾಘವೇಂದ್ರ ವಿರುದ್ಧ ದೂರು
Team Udayavani, Oct 18, 2017, 11:11 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಶಾಸಕ ಬಿ.ವೈ. ರಾಘವೇಂದ್ರ ಒಡೆತನದ ಕುಮುದ್ವತಿ ಮಹಾವಿದ್ಯಾನಿಲಯ ಸುಮಾರು ಐದು ಎಕರೆಗೂ ಅಧಿಕ ಕೆರೆ ಜಮೀನು ಒತ್ತುವರಿ ಮಾಡಿದೆ ಎಂದು ಆರೋಪಿಸಿ ಭೂಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಆರ್ಟಿಐ ಕಾರ್ಯಕರ್ತ ಹನುಮೇಗೌಡ ಅವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರದ ನಂದಿನಿ ಗ್ರಾಮದ ಸರ್ವೇ ನಂ. 31ರಲ್ಲಿ 25 ಎಕ್ರೆ ಕೆರೆ ಇದ್ದು, ಇದು ದಾಖಲೆಗಳಲ್ಲಿ ದೊಡ್ಡಕೆರೆ ಎಂದು ನಮೂದಾಗಿದೆ. ಆದರೆ, ಇದೇ ಗ್ರಾಮದ ಕೆರೆ ಪಕ್ಕದ ಸರ್ವೇ ನಂ. 38ರಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ವಿಜೇಂದ್ರ ಒಡೆತನದಲ್ಲಿ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯು ಕುಮುದ್ವತಿ ಎಂಬ ಮತ್ತೂಂದು ಕಾಲೇಜು ನಡೆಸುತ್ತಿದೆ. ಆಟದ ಮೈದಾನಕ್ಕಾಗಿ ಈ ಕಾಲೇಜಿನ ಆಡಳಿತ ಮಂಡಳಿಯವರು ಕೆರೆಯ ಐದಕ್ಕೂ ಅಧಿಕ ಎಕ್ರೆ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಕೆರೆಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ ಎಂದು ದೂರಿನಲ್ಲಿ ಹನುಮೇಗೌಡ ಆರೋಪಿಸಿದ್ದಾರೆ. ಈ ಸಂಬಂಧ ಕೆರೆ ಒತ್ತುವರಿ ಮಾಡಿದ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಬಿ.ವೈ. ರಾಘವೇಂದ್ರ, ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ತೇಜಸ್ವಿನಿ, ಖಜಾಂಚಿ ಬಿ.ವೈ. ವಿಜೇಂದ್ರ ಮತ್ತು ಸ್ಥಳೀಯ ರೈತರು ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ