ಸುದೀಪ್ ವಿರುದ್ಧ ದೂರು ದಾಖಲು
Team Udayavani, Jul 13, 2017, 2:45 AM IST
ಚಿಕ್ಕಮಗಳೂರು: ಚಿತ್ರೀಕರಣಕ್ಕೆ ಬಳಸಿಕೊಂಡಿದ್ದ ಮನೆಗೆ ಬಾಡಿಗೆ ನೀಡದಿರುವುದು ಹಾಗೂ ಚಿತ್ರೀಕರಣದ ವೇಳೆ ತೋಟವನ್ನು ಹಾಳು ಮಾಡಿದ್ದಾರೆಂದು ಆರೋಪಿಸಿ ಖ್ಯಾತ ನಟ ಕಿಚ್ಚ ಸುದೀಪ ವಿರುದ್ಧ ಮನೆಯ ಮಾಲೀಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಜೊತೆಗೆ ತಮ್ಮ ವಕೀಲರ ಮೂಲಕ ನೋಟಿಸ್ ಅನ್ನು ಜಾರಿಗೊಳಿಸಿದ್ದಾರೆ.
ಸುದೀಪ ನಿರ್ಮಾಣದ “ವಾರಸಾªರ’ ಧಾರಾವಾಹಿಯ ಚಿತ್ರೀಕರಣವನ್ನು ತಾಲೂಕಿನ ಬೈಗೂರು ಗ್ರಾಮದ ದೀಪಕ್ ಮಯೂರ್ ಅವರ ಮನೆ ಹಾಗೂ ಕಾμ ತೋಟದಲ್ಲಿ ಮಾಡಲಾಗಿತ್ತು. ಚಿತ್ರೀಕರಣ ಮುಗಿದ ನಂತರ ಮನೆ ಬಾಡಿಗೆ ನೀಡಿಲ್ಲ ಮತ್ತು ಚಿತ್ರೀಕರಣದ ವೇಳೆ ತೋಟವನ್ನು ಹಾಳು ಮಾಡಲಾಗಿದೆ ಎಂದು ದೀಪಕ್ ಮಯೂರ್ ನಿರ್ಮಾಪಕ ಕಿಚ್ಚ ಸುದೀಪ ಹಾಗೂ ಸಹ ನಿರ್ಮಾಪಕ ಮಹೇಶ್, ನಿರ್ದೇಶಕ ಗಡ್ಡ ವಿಜಿ ವಿರುದ್ಧ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಕಚೇರಿಗೆ
ದೂರು ಸಲ್ಲಿಸಿದ್ದಾರೆ. ಇದಲ್ಲದೆ ಮೂವರಿಗೂ ವಕೀಲರ ಮೂಲಕ ನೋಟಿಸ್ ಜಾರಿಯಾಗಿದೆ. ಕಾμ ತೋಟದಲ್ಲಿ “ವಾರಸಾªರ’ ಧಾರಾವಾಹಿಯ ಚಿತ್ರೀಕರಣ 40 ದಿನ ನಡೆದಿತ್ತು. ಮನೆ ಬಾಡಿಗೆ ದಿನಕ್ಕೆ 6 ಸಾವಿರದಂತೆ ನೀಡುವುದಾಗಿ ಹೇಳಲಾಗಿತ್ತು.
ಆದರೆ ಒಟ್ಟು ಬಾಡಿಗೆ ಹಣ 1.50 ಲಕ್ಷ ರೂ. ನೀಡಿಲ್ಲ. ಅಲ್ಲದೆ ಚಿತ್ರೀಕರಣದ ವೇಳೆ ತೋಟದಲ್ಲಿನ ಬೆಳೆ ನಾಶವಾಗಿದೆ. ಇದರ ನಷ್ಟವನ್ನು ಭರಿಸಿಕೊಡಬೇಕು ಎಂದು ದೂರಿನಲ್ಲಿ ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಮಹೇಶ್ ಹಾಗೂ ಗಡ್ಡ ವಿಜಿ ಅವರನ್ನು ಕರೆಸಿ ಹೇಳಿಕೆ ಪಡೆದು ಲೋಪವಾಗಿರುವುದು ಕಂಡುಬಂದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!