ಘೋಷಿತ ರೈಲ್ವೆ ಯೋಜನೆ 2021ಕ್ಕೆ ಪೂರ್ಣ
Team Udayavani, Sep 8, 2019, 3:05 AM IST
ಬಾಗಲಕೋಟೆ: ದೇಶದಲ್ಲಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಒತ್ತು ನೀಡಿದ್ದು, ಈಗಾಗಲೇ ಘೋಷಿಸಿರುವ ಹಾಗೂ ಅರ್ಧಕ್ಕೆ ನಿಂತಿರುವ ಎಲ್ಲ ಯೋಜನೆಗಳನ್ನು 2021ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ರೈಲ್ವೆ ಸೌಲಭ್ಯಗಳ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಹೋರಾಟಗಾರರೊಂದಿಗಿನ ಸಭೆಯಲ್ಲಿ ಮಾತನಾಡಿ, ಘೋಷಣೆಗೊಂಡು ಪೂರ್ಣಗೊಳ್ಳದ ಯೋಜನೆಗಳನ್ನು ಮುಕ್ತಾಯಗೊಳಿಸಲು ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈಗ ಸುವರ್ಣಯುಗ. ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ, ಗದಗ-ಹುಟಗಿ ಡಬ್ಲಿಂಗ್ ನಿರ್ಮಾಣ ಕಾರ್ಯಗಳು ನಡೆದಿದ್ದು, ಇವುಗಳಿಗೆ ವೇಗ ನೀಡಲಾಗುವುದು ಎಂದರು.
ಚರಂತಿಮಠರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಚಿವ: ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರು ಕಳೆದ ವಾರ ಜಿಲ್ಲಾಡಳಿತ ಭವನದಲ್ಲಿ ತಮ್ಮ ಪಕ್ಷದ ಶಾಸಕ ಡಾ|ವೀರಣ್ಣ ಚರಂತಿಮಠರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು. ಶನಿವಾರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರು ಚರಂತಿಮಠರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಹಮ್ಮಿಕೊಂಡಿದ್ದ ರೈಲ್ವೆ ಸೌಲಭ್ಯಗಳ ಕುರಿತು ಚರ್ಚೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವ ಸುರೇಶ ಅಂಗಡಿಯವರು ಡಾ|ಚರಂತಿಮಠರ ಕಾಲಿಗೆ ನಮಸ್ಕರಿಸಿದರು. ನೀವು ಸ್ವಾಮಿಗಳು, ಆಶೀರ್ವಾದ ಮಾಡಿ ಎಂದು ಹೇಳಿ ನಮಸ್ಕರಿಸಿದರು. ಅಷ್ಟರಲ್ಲೇ ಚರಂತಿಮಠರು ಸಚಿವ ಅಂಗಡಿಯವರ ಕೈ ಹಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ