ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ನಿರ್ಮಾಣ: ಸಿಎಂ ಸಭೆಯಲ್ಲಿ ತೀರ್ಮಾನ
ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆ
Team Udayavani, Jun 25, 2022, 4:08 PM IST
ಬೆಂಗಳೂರು: ಕೊಪ್ಪಳ ಜಿಲ್ಲೆಯ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ, ಕೆಲಸ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಅಂಜನಾದ್ರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ನಿರ್ಮಿಸಿ ಹೆಲಿ ಟೂರಿಸಂ ಮುಖಾಂತರ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುತ್ತದೆ. 120 ಕೋಟಿ ರೂ.ಗಳ ಸರಕಾರಿ ಅನುದಾನ ಬಳಸಿಕೊಂಡು ಮೂಲಸೌಕರ್ಯ ಕಲ್ಪಿಸಲು ನೀಲ ನಕ್ಷೆಯಂತೆ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ . ಈ ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯವಿದ್ದು, ಇದರಲ್ಲಿ 58 ಎಕರೆ ಖಾಸಗಿ ಜಮೀನಾಗಿದೆ. ಇದನ್ನು ರೈತರ ಒಪ್ಪಿಗೆಯ ಮೇರೆಗೆ ಭೂಸ್ವಾಧೀನ ಪಡಿಸುವಂತೆ ಅಥವಾ ಕೆಐಎಡಿಬಿ ಮೂಲಕ ಖರೀದಿಸುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದರು.
ಯೋಜನೆಯ ಮೊದಲ ಹಂತದಲ್ಲಿ ಅಂಜನಾದ್ರಿಯ ಸಂಪರ್ಕ ರಸ್ತೆ ಅಭಿವೃದ್ಧಿ, ಪರ್ಯಾಯ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಗಂಗಾವತಿ ವರೆಗಿನ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದಕ್ಕೆ ವಿಸ್ತೃತ ಯೋಜನಾ ವರದಿಯನ್ನು ಕೂಡಲೇ ಸಿದ್ಧಪಡಿಸುವಂತೆ ಸೂಚಿಸಿದರು.ಇದರೊಂದಿಗೆ ಬೆಟ್ಟದ ಬುಡದಲ್ಲಿ ಯಾತ್ರಿಕರಿಗೆ ಪಾರ್ಕಿಂಗ್ ಮತ್ತಿತರ ಮೂಲಸೌಕರ್ಯ ಒದಗಿಸುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಯೋಜನೆಯ ಆರ್ಥಿಕ ಅನುಮೋದನೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.
ದೇಶದ 4 ಪವಿತ್ರ ಸರೋವರಗಳಲ್ಲಿ ಪಂಪಾ ಸರೋವರವು ಇಲ್ಲಿಯೇ ಇದೆ ಆದ್ದರಿಂದ ಕಿಷ್ಕಿಂದಾ ಅಂಜನಾದ್ರಿ ಪ್ರದೇಶವೇ ಹನುಮಂತ ಜನಿಸಿದ ನಾಡಾಗಿದ್ದು ಬೇರೆಯವರು ಏನೇ ಹೇಳಲಿ ಇದಕ್ಕೆ ಜನರು ಮನ್ನಣೆ ಕೊಡಬಾರದು. ಅಂಜನಾದ್ರಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಸ್ಥಳೀಯರು ಸೇರಿದಂತೆ ಎಲ್ಲರೂ ಸಹಕಾರ ನೀಡುವ ಮೂಲಕ ನಮ್ಮ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಹೇಳಿದರು.
ರೋಪ್ ವೇ:
ಅಂಜನಾದ್ರಿ ಬೆಟ್ಟಕ್ಕೆ 430 ಮೀಟರ್ ರೋಪ್ ವೇ ನಿರ್ಮಿಸಲು ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ಸೂಚಿಸಿದರು.
ಈ ಯೋಜನೆಯಡಿ ರೋಪ್ ವೇ ಬೇಸ್ನಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ, ಸರದಿಯಲ್ಲಿ ಕಾಯುವ ಸಂದರ್ಭ ಬಂದಾಗ ಅಗತ್ಯ ಮೂಲಸೌಕರ್ಯಗಳು, ಪಾರ್ಕಿಂಗ್ ಸೌಲಭ್ಯಗಳನ್ನು ಕಲ್ಪಿಸಲು ಸೂಚಿಸಿದರು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೊಮ್ಮಾಯಿ ಸೂಚಿಸಿದರು.
ಜುಲೈ 15 ರೊಳಗೆ ತಾವು ಖುದ್ದು ಅಂಜನಾದ್ರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಸಚಿವರಾದ ಆನಂದ್ ಸಿಂಗ್, ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸವರಾಜ ದಡೆಸೂಗುರ, ಪರಣ್ಣ ಮುನವಳ್ಳಿ, ಅಮರೇಗೌಡ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕ್ರೂಪ್ ಕೌರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ