ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ ‘ಸಮಗ್ರ ಕೃಷಿ ಪದ್ಧತಿ’: ಸಚಿವರ ಶ್ಲಾಘನೆ
Team Udayavani, Feb 10, 2022, 12:29 PM IST
ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದ್ದು “ಸಮಗ್ರ ಕೃಷಿ ಪದ್ಧತಿ. ಇಂತಹ ಮಾದರಿ ರೈತ ‘ದುರ್ಗಪ್ಪ ಅಂಗಡಿ’ಯವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಖುದ್ದು ಕಚೇರಿಗೆ ಕರೆಯಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಡಿಮೆ ನೀರಿನಲ್ಲಿಯೂ ಕೃಷಿ ಸಾಧನೆ ಮಾಡುವ ಕೋಲಾರದ ರೈತರು ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಸಮಗ್ರ ಕೃಷಿ ಪದ್ಧತಿ ಎನ್ನುವುದು ರೈತರನ್ನು ಒಂದಲ್ಲ ಒಂದು ರೀತಿಯಲ್ಲಿ ಕೈಹಿಡಿಯುತ್ತದೆ. ಸಾಲ ಮಾಡಿದೆನೆಂದು ಕೊರಗುವುದನ್ನು ಬಿಟ್ಟು ಅದರಿಂದ ಹೊರಬಂದು ಆದಾಯವನ್ನು ದ್ವಿಗುಣಗೊಳಿಸುವುದು ಹೇಗೆ ಎಂಬುದನ್ನು ದುರ್ಗಪ್ಪ ಅಂಗಡಿ ಮಾಡಿ ತೋರಿಸಿದ್ದಾರೆ. ಇಂತಹ ರೈತರು ಎಲ್ಲಾ ಅನ್ನದಾತರಿಗೂ ಸ್ಫೂರ್ತಿ ಎಂದು ಬಿ.ಸಿ.ಪಾಟೀಲ್ ಶ್ಲಾಘಿಸಿದರು.
ಇದನ್ನೂ ಓದಿ:12 ತಿಂಗಳೂ ಫಿಲ್ಟರ್ ನದ್ದೇ ಸಮಸ್ಯೆ ! ಕೆರೆಯಲ್ಲಿ ಆಗಾಗ ಕೆಟ್ಟು ನಿಲ್ಲುವ ಫಿಲ್ಟರ್
ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದಕ್ಕಾಗಿಯೇ ‘ರೈತರೊಂದಿಗೊಂದು ದಿನ’ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ರೈತನ ಸಾಧನೆ ಅವನಲ್ಲಿನ ಆತ್ಮಸ್ಥೈರ್ಯ ಹೇಗೆ ಪರಿಣಾಮಕಾರಿ ಮತ್ತು ಸ್ಫೂರ್ತಿದಾಯಕವೆನ್ನುವುದನ್ನು ದುರ್ಗಪ್ಪ ಅಂಗಡಿ ಮಾಡಿ ತೋರಿಸಿದ್ದಾರೆ. ಇಂತಹ ಗಟ್ಟಿಮನಸಿನ ರೈತರೇ ಇತರರಿಗೂ ಮಾದರಿಯಾಗಬಲ್ಲರು. ಅಲ್ಲದೇ ಅನ್ನದಾತನ ಸ್ಫೂರ್ತಿದಾಯಕ ಬದುಕು ವಿಶ್ವವಿದ್ಯಾಲಯದಲ್ಲಿ ಪಠ್ಯವಾಗುವುದೆಂದರೆ ಅದು ನಮ್ಮ ರಾಜ್ಯದ ಅನ್ನದಾತ ಎನ್ನುವುದು ಹೆಮ್ಮೆಯೇ ಸರಿ. ಸಾಧನೆಗೆ ಶೈಕ್ಷಣಿಕ ಅರ್ಹತೆಯೊಂದೇ ಮುಖ್ಯವಲ್ಲ. ಸಾಧಿಸುವ ಛಲ, ದಿಟ್ಟ ನಡೆ ಎಂಬುದನ್ನು ದುರ್ಗಪ್ಪ ಅಂಗಡಿ ಮಾಡಿ ತೋರಿಸಿ ಇತರ ರೈತರಿಗೂ ಸ್ಫೂರ್ತಿದಾಯಕರಾಗಿ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ ಎಂದು ಬಿ.ಸಿ.ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು