ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್
Team Udayavani, Jan 25, 2021, 3:55 PM IST
ಮೈಸೂರು: ಮುಂದಿನ ದಿನಗಳಲ್ಲಿ ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುತ್ತೇವೆ. ಮುಂದೆ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಪಾಠ ಮಾಡುವ ಅವಕಾಶ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಸದ್ಯ 50% ರಷ್ಟು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿದ್ದೇವೆ. ಮುಂದೆ ರಾಜ್ಯದಲ್ಲಿರುವ ಎಲ್ಲಾ ಉಪನ್ಯಾಸಕರಿಗೂ ಅವಕಾಶ ಕಲ್ಪಿಸುತ್ತೇವೆ ಎಂದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಖಾತೆ ವಿಚಾರದ ಗೊಂದಲದ ಬಗ್ಗೆ ಕೇಳಲಾದ ಪ್ರಶ್ನೆಗೆ, ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದರು.
ಇದನ್ನೂ ಓದಿ:ಮೆಡಿಕಲ್ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ
ಸಚಿವ ಸಂಪುಟಕ್ಕೆ ತಗೆದುಕೊಳ್ಳುವುದು, ಖಾತೆ ಹಂಚಿಕೆ ಮಾಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಅವರಿಗೆ ಪರಮಾಧಿಕಾರವಿದೆ. ಸಿಎಂ ಯಡಿಯೂರಪ್ಪನವರು ಏನು ನಿರ್ಧಾರ ತಗೆದುಕೊಳ್ಳುತ್ತಾರೋ ಅದಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದರು.
ರಾಜಕೀಯದಲ್ಲಿ ಸವಾಲು ಸಮಸ್ಯೆ ಇದ್ದೇ ಇರುತ್ತದೆ. ಎಲ್ಲವನ್ನೂ ಸದ್ಯದಲ್ಲೇ ಬಗೆಹರಿಸಿಕೊಂಡು ಮುಂದೆ ಹೋಗುತ್ತೇವೆ. ಅಸಮಾಧಾನಿತ ಸಚಿವರೂ ನಮ್ಮ ಸ್ನೇಹಿತರೇ. ಅವರ ಜೊತೆ ಪರಸ್ಪರ ಕುಳಿತು ಮಾತನಾಡುತ್ತೇವೆ. ಒಂದು ಪಕ್ಷದಲ್ಲಿ ಎಲ್ಲರೂ ಅಣ್ಣ ತಮ್ಮಂದಿರ ರೀತಿ ಒಗ್ಗಟಿನಿಂದ ಕೆಲಸ ನಿರ್ವಹಿಸುತ್ತೇವೆ ಎಂದರು.
ಇದನ್ನೂ ಓದಿ: ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್
ರೈತರ ಪ್ರತಿಭಟನೆಯ ಬಗ್ಗೆ ಮಾತನಾಡಿದ ಅವರು, ನಾಳೆ ರೈತರು ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಕೃಷಿ ಕಾಯಿದೆಗಳು ರೈತರ ಪರವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲವೂ ರೈತರಿಗೆ ಗೊತ್ತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ