ಬೆಳಗ್ಗಿನ ಆಜಾನ್ಗೆ ಮೈಕ್ ಬಳಸೆವು; ಮುಸ್ಲಿಂ ಧಾರ್ಮಿಕ, ರಾಜಕೀಯ ಮುಖಂಡರ ಸಭೆಯಲ್ಲಿ ತೀರ್ಮಾನ
Team Udayavani, May 15, 2022, 7:10 AM IST
ಬೆಂಗಳೂರು: ಶಬ್ದಮಾಲಿನ್ಯಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಹಾಗೂ ರಾಜ್ಯ ಸರಕಾರ ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸದಿರಲು ನಿರ್ಧರಿಸಿರುವ ಮುಸ್ಲಿಂ ಸಮುದಾಯ, ಮುಂಜಾನೆಯ ಪ್ರಾರ್ಥನೆ (ಫಜರ್ ನಮಾಜ್)ಗೆ ಮೈಕ್ ಇಲ್ಲದೆ ಆಜಾನ್ ನೀಡಲು ತೀರ್ಮಾನಿಸಿದೆ.
ಕರ್ನಾಟಕದ ಅಮಿರೆ ಷರಿಯತ್ ಮೌಲಾನ ಸಗೀರ್ ಅಹ್ಮದ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ದಾರುಲ್ ಉಲೂಮ್ ಸಬೀಲುರ್ರಷಾದ್ನಲ್ಲಿಜರಗಿದ ಮುಸ್ಲಿಂ ಧಾರ್ಮಿಕ ಹಾಗೂ ಇತರ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಬೆಳಗ್ಗಿನ ಆಜಾನ್ಗೆ ಮೈಕ್ ಬಳಸದಂತೆ ರಾಜ್ಯದ ಎಲ್ಲ ಮಸೀದಿಗಳಿಗೆ ಅಮಿರೆ ಷರಿಯತ್ ಮನವಿ ಮಾಡಿದ್ದಾರೆ.
ಅಗತ್ಯ ಅನುಮತಿ ಪಡೆದುಕೊಳ್ಳಿ
ಅನುಮತಿಸಿದ ಅವಧಿಗಳಲ್ಲಿ ಶಬ್ದ ಪ್ರಮಾಣ ಎಷ್ಟಿರಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಧ್ವನಿವರ್ಧಕಗಳ ಶಬ್ದ ನಿಯಂತ್ರಿಸುವ ಉಪಕರಣ ಅಳವಡಿಸಿಕೊಳ್ಳುವಂತೆ ಎಲ್ಲ ಮಸೀದಿಗಳ ವ್ಯವಸ್ಥಾಪನ ಸಮಿತಿಗಳಿಗೆ ಸಗೀರ್ ಅಹ್ಮದ್ ಮನವಿ ಮಾಡಿಕೊಂಡಿದ್ದಾರೆ.
ಮೌಲಾನ ಮಕ್ಸೂದ್ ಇಮ್ರಾನ್ ರಷಾದಿ, ಮೌಲಾನ ಇಫೆಖಾರ್ ಖಾಸ್ಮಿ, ವಿಪಕ್ಷ ಉಪ ನಾಯಕ ಯು.ಟಿ. ಖಾದರ್, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ, ಮಾಜಿ ಸಚಿವ ಜಮೀರ್ ಅಹ್ಮದ್, ಶಾಸಕರಾದ ನಸೀರ್ ಅಹ್ಮದ್, ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ರಹೀಂ ಖಾನ್, ಕಾಂಗ್ರೆಸ್ ಮುಖಂಡ ಅಬ್ದುಲ್ ಜಬ್ಟಾರ್, ವಕೀಲ ರಾದ ಅಕ್ಮಲ್ ರಿಜ್ವಿ, ಅಬ್ದುಲ್ ರಿಯಾಜ್ ಖಾನ್ ಮತ್ತಿತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ