ಐದೂವರೆ ಗಂಟೆ ಕಡ್ಡಾಯವಾಗಿ ಶಾಲೆ ನಡೆಸಿ; ಶಿಕ್ಷಣ ಇಲಾಖೆ ಸೂಚನೆ


Team Udayavani, Sep 22, 2022, 6:40 AM IST

ಐದೂವರೆ ಗಂಟೆ ಕಡ್ಡಾಯವಾಗಿ ಶಾಲೆ ನಡೆಸಿ; ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಖಾಸಗಿ ಶಾಲೆಗಳು ಪ್ರತಿ ದಿನ ಐದೂವರೆ ಗಂಟೆ ಮತ್ತು ಶನಿವಾರ ಅರ್ಧ ದಿನ ಶಾಲೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ ಹಾಗೂ ಅದರಡಿ ರಚಿತವಾದ ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ, ಪಠ್ಯಕ್ರಮ, ನಿಯಂತ್ರಣ ಮತ್ತು ಇತರೆ ಕಾಯ್ದೆ-1995ರಲ್ಲಿ ನಿಯಮಗಳನ್ನು ಜಾರಿಗೊಳಿಸಿದ್ದು, ಈ ನಿಯಮಗಳ ಪ್ರಕಾರ ಪ್ರತಿ ದಿನ ಐದೂವರೆ ಗಂಟೆ ಶಾಲೆಗಳನ್ನು ಕಡ್ಡಾಯವಾಗಿ ನಡೆಸಬೇಕಿದೆ.

ಆದರೆ, ರಾಜ್ಯದಲ್ಲಿರುವ ಕೆಲವು ಖಾಸಗಿ ಶಾಲೆಗಳು ನೋಂದಣಿ ಮತ್ತು ಮಾನ್ಯತೆಯನ್ನು ಸರ್ಕಾರದಿಂದ ಪಡೆದು ನಿಯಮಗಳನ್ನು ಉಲ್ಲಂಘಿಸಿ ತಮ್ಮ ಮನಬಂದಂತೆ ಶಾಲೆಗಳನ್ನು ಆರಂಭ ಮಾಡುತ್ತಿದ್ದಾರೆ. ಈ ಸಂಬಂಧ ಪೋಷಕರು, ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ದೂರುಗಳನ್ನು ಪರಿಶೀಲಿಸಲು ಇಲಾಖೆಯ ಬಿಇಒ, ಬಿಆರ್‌ಪಿ ಮತ್ತು ಸಿಆರ್‌ಪಿಗಳಿಗೆ ಸೂಚನೆ ನೀಡಲಾಗಿದೆ.

ಪ್ರಸ್ತುತ ಬೆಂಗಳೂರು ನಗರಕ್ಕೆ ಸೀಮಿತಗೊಳಿಸಿ ಬೆಳಗ್ಗೆ 8ರಿಂದ 8.30ರೊಳಗೆ ಶಾಲೆಯನ್ನು ಆರಂಭಿಸಬೇಕು. ಪ್ರಾರ್ಥನೆಗೆ 10 ನಿಮಿಷ ಹೊರತುಪಡಿಸಿ ಮತ್ತು ಮಧ್ಯಾಹ್ನದ ಉಪಹಾರಕ್ಕೆ 30ರಿಂದ 40 ನಿಮಿಷ ಹೊರತುಪಡಿಸಿ ಐದೂವರೆ ಗಂಟೆ ಕಾಲ ಶಾಲೆಯನ್ನು ನಡೆಸಬೇಕು ಎಂಬ ಆದೇಶವನ್ನು ರಾಜ್ಯಾದ್ಯಂತ ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚಿಸಿದ್ದಾರೆ.

ಬಿಆರ್‌ಪಿ/ಸಿಆರ್‌ಪಿಗಳಿಗೆ ಎಚ್ಚರಿಕೆ
ಬಿಇಒ, ಸಿಆರ್‌ಪಿ ಮತ್ತು ಬಿಆರ್‌ಪಿಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳ ಮೇಲುಸ್ತುವಾರಿ ಪರಿಶೀಲಿಸುವ ಜವಾಬ್ದಾರಿ ನೀಡಲಾಗಿದ್ದರೂ ಸರಿಯಾಗಿ ಕರ್ತವ್ಯ ನಿರ್ವಹಿಸದಿರುವ ಬಗ್ಗೆಯೂ ದೂರುಗಳು ಬಂದಿವೆ. ನಿಯಮಾನುಸಾರ ಕಾರ್ಯ ನಿರ್ವಹಿಸದಿದ್ದರೆ ಇಲಾಖೆ ಪರಿಶೀಲಿಸಿ ತಮ್ಮ ಹುದ್ದೆಗಳನ್ನು ರದ್ದುಪಡಿಸಿದ್ದಲ್ಲಿ ಶಿಕ್ಷಕರಾಗಿ ಮುಂದುವರಿಯಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದೆ.

ಖಾಸಗಿ ಶಾಲೆಗಳು ಅನುಮತಿ ಪಡೆದಿರುವ ಮಾಧ್ಯಮ/ಪಠ್ಯಕ್ರಮದಲ್ಲಿ ಬೋಧನೆ ಮಾಡದೆ ನಿಯಮ ಉಲ್ಲಂ ಸುವ ಶಾಲೆಗಳ ವಿರುದ್ಧ ಕ್ರಮ ವಹಿಸದಿರುವುದು ಕೂಡ ಕೇಳಿ ಬಂದಿದೆ. ಇದು ಮುಖ್ಯಮಂತ್ರಿಗಳ ಗಮನಕ್ಕೂ ಬಂದಿದೆ. ಇಲಾಖೆ ತಲೆ ತಗ್ಗಿಸುವ ಕೆಲಸ ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪ ನಿರ್ದೇಶಕರು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಸಹ ನಿರ್ದೇಶಕರು ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ ಮೇಲಧಿಕಾರಿಗಳಿಗೆ ವರದಿ ನೀಡಬೇಕು. ಯಾವ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲವೋ ಅಂತಹವರ ವಿರುದ್ಧ ಇಲಾಖೆ ಕ್ರಮ ಜರುಗಿಸಲಿದೆ ಎಂದು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.