30ರಿಂದ ವಿಶ್ವಾಸ ಕಿರಣ
Team Udayavani, Sep 23, 2019, 3:00 AM IST
ಬೆಂಗಳೂರು: ದ್ವಿತೀಯ ಪಿಯುದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಗಳಿಗೆ ಎಸ್ಸಿಪಿ-ಟಿಎಸ್ಪಿ ಯೋಜನೆಯ ವಿಶ್ವಾಸಕಿರಣ ಕಾರ್ಯಕ್ರಮದಡಿ ಇಂಗ್ಲಿಷ್ ಭಾಷೆಯ ವಿಶೇಷ ಬೋಧನೆ ಸೆ.30ರಿಂದ ಅ.12ರ ತನಕ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ರಾಜ್ಯದ 411 ಸರ್ಕಾರಿ ಪಿಯು ಕಾಲೇಜಿ ನಲ್ಲಿ ದ್ವಿತೀಯ ಪಿಯುನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ 9 ದಿನಗಳ ಇಂಗ್ಲಿಷ್ ಬೋಧನೆಯ ವಿಶೇಷ ತರಗತಿ ಇರಲಿದೆ. ಕಾಲೇಜುಗಳೇ ತರಬೇತಿ ಕೇಂದ್ರವಾಗಿರಲಿದೆ. ಜಿಲ್ಲಾ ಉಪನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇದರ ಉಸ್ತುವಾರಿ ವಹಿಸಿರುತ್ತಾರೆ.
ಪ್ರತಿ ಕಾಲೇಜಿಗೂ ಒಬ್ಬ ಹಿರಿಯ ಆಂಗ್ಲ ಉಪನ್ಯಾಸಕ ಅಥವಾ ಪ್ರಾಂಶುಪಾಲರನ್ನು ಸಂಯೋಜಿಸಲಾಗುತ್ತದೆ. ದಿನಕ್ಕೆ 3 ತರಗತಿಗಳು 90 ನಿಮಿಷದ ಕಾಲಮಿತಿಯಲ್ಲಿ ನಡೆಯಲಿದೆ. ವಿಶೇಷ ತರಗತಿಯ ಅಂತ್ಯದ ದಿನದಲ್ಲಿ 100 ಅಂಕಗಳಿಗೆ ಪರೀಕ್ಷೆ ನಡೆಸಿ, ಫಲಿತಾಂಶವನ್ನು ಕ್ರೋಢೀಕರಿಸಿ ಇಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ
KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ
Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ
ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್