ಕೇಂದ್ರ, ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ 10 ಪ್ರಶ್ನೆ
Team Udayavani, Sep 21, 2019, 3:03 AM IST
ಬೆಂಗಳೂರು: ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಉಂಟಾದ ಅನಾಹುತಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಎರಡೂ ಸರ್ಕಾರಗಳಿಗೆ “ಎದ್ದೇಳು ಬಿಜೆಪಿ’ ಎಂದು ಹ್ಯಾಷ್ ಟ್ಯಾಗ್ ಮೂಲಕ 10 ಪ್ರಶ್ನೆಗಳನ್ನು ಕೇಳಿದೆ.
1.ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ?
2.ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಸದ ಫಲ ಏನು?
3.ಈ ಭೀಕರ ಪ್ರವಾಹ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಯಾಕೆ ಘೋಷಣೆ ಮಾಡಿಲ್ಲ?
4.ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದ್ದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರ ಸರ್ಕಾರ 5000 ಕೋಟಿ ರೂ. ಮಧ್ಯಂತರ ಪರಿಹಾರ ಏಕೆ ನೀಡಿಲ್ಲ?
5.ಪ್ರಧಾನಿ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡದೇ ಕರ್ನಾಟಕವನ್ನು ಅವಮಾನಿಸುತ್ತಿರುವುದೇಕೆ?
6.ತಕ್ಷಣ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿಲ್ಲ ಏಕೆ?
7.ರಾಜ್ಯದ 25 ಮಂದಿ ಬಿಜೆಪಿ ಸಂಸದರು ತಮ್ಮ ಕರ್ತವ್ಯ ಮರೆತು ಕಣ್ಮರೆಯಾಗಿರುವುದೇಕೆ?
8.ಸಂತ್ರಸ್ತರ ಪ್ರತಿಭಟನೆಗೆ ಹೆದರಿ ಬೆಳಗಾವಿಯಲ್ಲಿ ಅಧಿವೇಶನ ಮಾಡದಿರುವುದು ಪಲಾಯನವಲ್ಲವೇ?
9.ರಾಜ್ಯ ಸರ್ಕಾರವು ಪ್ರಧಾನಿ ಬಳಿ ಪರಿಹಾರ ಕೇಳಲು ಸರ್ವ ಪಕ್ಷಗಳ ನಾಯಕರು, ಕೆಲ ಸಂತ್ರಸ್ತರು, ರೈತ ಮುಖಂ ಡರ ನಿಯೋಗ ಏಕೆ ಕರೆದೊಯ್ಯುತ್ತಿಲ್ಲ?
10.ನಷ್ಟ 35,160 ಕೋಟಿ ಎಂದು ಅಂದಾಜಿಸಿ ರಾಜ್ಯವು 1500 ಕೋಟಿ ಬಿಡುಗಡೆ ಮಾಡಿರುವುದು ಸಂತ್ರಸ್ತರಿಗೆ ಮಾಡಿರುವ ಅನ್ಯಾಯವಲ್ಲವೇ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ